ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm