ಬ್ರೇಕಿಂಗ್ ನ್ಯೂಸ್
03-12-23 11:22 am By Giridhar Shetty, Mangaluru ಕರಾವಳಿ
ಮಂಗಳೂರು, ಡಿ.3: ಲೋಕಸಭೆ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿ ಯಾರು ಎನ್ನುವ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರ ಅಹವಾಲು ಕೇಳಲು ಜಿಲ್ಲೆಯ ಉಸ್ತುವಾರಿ ಮಧು ಬಂಗಾರಪ್ಪ ಪಕ್ಷದ ಜಿಲ್ಲಾ ಕಚೇರಿಗೆ ಆಗಮಿಸಿದ್ದರು. ಶನಿವಾರ ಸಂಜೆ ಏಳು ಗಂಟೆಗೆ ಮಲ್ಲಿಕಟ್ಟೆ ಕಚೇರಿಗೆ ಆಗಮಿಸಿದ ಸಚಿವರು, ಪಕ್ಷದ ಬ್ಲಾಕ್ ಮಟ್ಟದ ಪ್ರಮುಖರು, ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷರು, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅಭಿಪ್ರಾಯ ಆಲಿಸಿದರು.
ಸಚಿವ ಮಧು ಬಂಗಾರಪ್ಪ ಒಬ್ಬರೇ ವೇದಿಕೆಯಲ್ಲಿ ಕುಳಿತು ಪ್ರಮುಖ ಸಮಿತಿಗಳ ಅಭಿಪ್ರಾಯಗಳನ್ನು ಪ್ರೇತ್ಯೇಕವಾಗಿ ಆಲಿಸಿದರು. ಈ ವೇಳೆ, ಹಲವು ನಾಯಕರ ಹೆಸರುಗಳು ಪ್ರಸ್ತಾಪವಾಗಿದ್ದು, ಹೆಚ್ಚಿನವರು ಹೊಸ ಮುಖವನ್ನು ಕಣಕ್ಕಿಳಿಸಬೇಕು ಎನ್ನುವ ಆಗ್ರಹ ಮಾಡಿದ್ದಾರೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಸದಸ್ಯರು ಮತ್ತು ಬ್ಲಾಕ್ ಮಟ್ಟದ ಪ್ರಮುಖರು ಹೊಸ ಮುಖವನ್ನು ಕಣಕ್ಕಿಳಿಸಿದಲ್ಲಿ ಈ ಬಾರಿ ಗೆಲುವು ಖಚಿತ ಎನ್ನುವ ಅಭಿಪ್ರಾಯ ನೀಡಿದ್ದಾರೆ. ವಕೀಲ ಆರ್. ಪದ್ಮರಾಜ್ ಹೆಸರು ಹೆಚ್ಚು ಪ್ರಸ್ತಾಪವಾಗಿದ್ದು ಬಿಜೆಪಿಯಲ್ಲಿ ಹಾಲಿ ಸಂಸದರ ಬಗೆಗಿರುವ ಭಿನ್ನಮತ ತಮಗೆ ವರವಾಗಬಹುದು ಎಂದು ಅಭಿಪ್ರಾಯ ನೀಡಿದ್ದಾರೆ.




ಜಿಲ್ಲಾ ಪಂಚಾಯತ್ ಸದಸ್ಯರು ಮತ್ತು ಬಂಟ್ವಾಳ, ಪುತ್ತೂರು ಭಾಗದ ಪಕ್ಷದ ಪ್ರಮುಖರು ಮಾಜಿ ಸಚಿವ ರಮಾನಾಥ ರೈ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ. ಇದಲ್ಲದೆ, ಕೆಲವು ನಾಯಕರು ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ವಿನಯ ಕುಮಾರ್ ಸೊರಕೆ ಹೆಸರನ್ನೂ ಹೇಳಿದ್ದಾರೆ. ಯುವ ಮುಖಂಡ ರಕ್ಷಿತ್ ಶಿವರಾಂ ಹೆಸರೂ ಕೇಳಿಬಂದಿದೆ. ಮುಸ್ಲಿಂ ಸಮುದಾಯದಿಂದ ಕಣಚೂರು ಮೋನು, ಇನಾಯತ್ ಆಲಿ ಹೆಸರೂ ಪ್ರಸ್ತಾಪವಾಗಿದೆ. ಮಹಿಳೆಯರಿಗೆ ನೀಡುವುದಾದರೆ ಮಮತಾ ಗಟ್ಟಿ, ಶಕುಂತಳಾ ಶೆಟ್ಟಿಗೆ ನೀಡಬೇಕೆಂಬ ಮಾತು ಕೇಳಿಬಂದಿದೆ. ಎಲ್ಲರ ಅಭಿಪ್ರಾಯವನ್ನೂ ಮಧು ಬಂಗಾರಪ್ಪ ಆಲಿಸಿದ್ದು, ಕೆಪಿಸಿಸಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.




ಸಭೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಸಂಸದ ಬಿ. ಇಬ್ರಾಹಿಂ, ಅಭಯಚಂದ್ರ ಜೈನ್, ಇಬ್ರಾಹಿಂ ಕೋಡಿಜಾಲ್, ಜೆ.ಆರ್ ಲೋಬೊ, ಜಿಎ ಬಾವ, ಮಿಥುನ್ ರೈ, ರಕ್ಷಿತ್ ಶಿವರಾಂ, ಇನಾಯತ್ ಆಲಿ, ಮಮತಾ ಗಟ್ಟಿ, ಜಿ. ಕೃಷ್ಣಪ್ಪ, ಕಣಚೂರು ಮೋನು, ಪದ್ಮರಾಜ್ ಆರ್. ಸೇರಿದಂತೆ ಪಕ್ಷದ ಹಲವು ಸಮಿತಿಗಳ ಮುಖಂಡರು ಉಪಸ್ಥಿತರಿದ್ದರು.
Congress Ramanath Rai and Padmaraj names proposed for Loksabha election candidates from Mangalore, Madhu Bangarappa.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm