ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am