ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm