ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm