ಬ್ರೇಕಿಂಗ್ ನ್ಯೂಸ್
04-12-23 02:39 pm Mangalore Correspondent ಕರಾವಳಿ
ಮಂಗಳೂರು, ಡಿ.3: ನಗರದ ಕದ್ರಿ, ಶಿವಭಾಗ್, ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣವೊಂದು ರಾತ್ರಿ ವೇಳೆ ಓಡಾಟ ನಡೆಸಿದ್ದು, ವಿಷಯ ತಿಳಿದ ಅರಣ್ಯ ಇಲಾಖೆಯ ಸಿಬಂದಿ ಸ್ಥಳದಲ್ಲಿ ಹುಡುಕಾಟ ನಡೆಸಿದ್ದಾರೆ.
ಭಾನುವಾರ ರಾತ್ರಿ ವೇಳೆ ಕದ್ರಿ ಮತ್ತು ಕೈಬಟ್ಟಲ್ ಪರಿಸರದಲ್ಲಿ ಕಾಡುಕೋಣ ಸಂಚಾರ ನಡೆಸಿರುವುದು ಸಿಸಿಟಿವಿಯಲ್ಲಿ ದಾಖಲಾಗಿದೆ. ಮನೆಯ ಕಾಂಪೌಂಡ್ ಒಳಗಡೆ ಕೋಣ ಬಂದಿದ್ದು ಜನರು ಆತಂಕಗೊಂಡಿದ್ದಾರೆ. ಶಿವಭಾಗ್ ಕಡೆಯಿಂದ ಬಂದಿದ್ದ ಕಾಡು ಕೋಣ ಬಳಿಕ ರಸ್ತೆಯಲ್ಲೇ ಸಾಗಿ ಕೈಬಟ್ಟಲ್ ಮೂಲಕ ತೆರಳಿ ಕಣ್ಮರೆಯಾಗಿದೆ. ಈ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಇದರಂತೆ, ಇಂದು ಬೆಳಗ್ಗೆ ಕದ್ರಿ ಪರಿಸರದಲ್ಲಿ ಅರಣ್ಯ ಸಿಬಂದಿ ಹುಡುಕಾಟ ನಡೆಸಿದ್ದಾರೆ.



ಈ ಬಗ್ಗೆ ಎಸಿಎಫ್ ಶ್ರೀಧರ್ ಅವರಲ್ಲಿ ಕೇಳಿದಾಗ, ಕಾಡುಕೋಣ ಸಂಚಾರ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ನಿನ್ನೆ ರಾತ್ರಿ ಸ್ಥಳೀಯರು ಫೋನ್ ಮಾಡಿ ತಿಳಿಸಿದ್ದಾರೆ. ಸಿಸಿಟಿವಿಯಲ್ಲಿ ಕಾಡುಕೋಣ ಪತ್ತೆಯಾಗಿದ್ದನ್ನು ಗಮನಿಸಿದ್ದೇವೆ. ನಾವು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ, ಪತ್ತೆಯಾಗಿಲ್ಲ. ಇತ್ತೀಚೆಗೆ ಕುಲಶೇಖರ ಪರಿಸರದಲ್ಲಿ ಕಾಡುಕೋಣ ಕಂಡುಬಂದಿತ್ತು. ಅದನ್ನು ರಾತ್ರಿ ವೇಳೆಯೇ ಮರಳಿ ಕಾಡಿಗೆ ಅಟ್ಟುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮೂರು ವರ್ಷಗಳ ಹಿಂದೆ ಮಂಗಳೂರು ನಗರಕ್ಕೆ ಬಂದಿದ್ದ ಕಾಡುಕೋಣವನ್ನು ಹಿಡಿಯುವ ಪ್ರಯತ್ನದಲ್ಲಿ ಅರಿವಳಿಕೆ ಇಂಜೆಕ್ಷನ್ ಕೊಟ್ಟಿದ್ದರಿಂದ ಸತ್ತು ಹೋಗಿತ್ತು. ನೀರುಮಾರ್ಗ, ಬಜ್ಪೆ ಪರಿಸರದ ಕಾಡಿನಲ್ಲಿ ಕಾಡು ಕೋಣ ವಾಸವಿದ್ದು, ಅಲ್ಲಿಂದ ರಾತ್ರಿ ವೇಳೆ ಬಂದಿರಬಹುದು ಅನ್ನುವ ಅಭಿಪ್ರಾಯ ಅರಣ್ಯ ಇಲಾಖೆಯ ಅಧಿಕಾರಿಗಳದ್ದಿದೆ. ಕದ್ರಿ ಪರಿಸರದಲ್ಲಿ ನಿನ್ನೆ ರಾತ್ರಿ ಕೋಣವನ್ನು ಹಲವರು ಕಂಡಿದ್ದಾರೆ. ಕಾಡು ಕೋಣ ಬಂದಿದೆ ಎನ್ನುವ ಸುದ್ದಿ ಕೇಳಿದ ಸ್ಥಳೀಯರು ಆತಂಕಗೊಂಡಿದ್ದಾರೆ.
Mangalore kadu kona found in Kadri area, forest officals in search. Residents in panic after some saw the bison moving around.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm