ಬ್ರೇಕಿಂಗ್ ನ್ಯೂಸ್
07-12-23 01:44 pm Mangalore Correspondent ಕರಾವಳಿ
ಮಂಗಳೂರು, ಡಿ.7: ಮೈನ್ಸ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಆಟೋ ರಿಕ್ಷಾ ಮತ್ತು ಬೈಕ್ ಜಖಂ ಆಗಿದ್ದಲ್ಲದೆ, ರಸ್ತೆ ಬದಿ ಕುಳಿತಿದ್ದ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಗಳೂರು ಹೊರವಲಯದ ಮುಲ್ಕಿ ಪೇಟೆಯಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದ್ದು ಉಡುಪಿಯತ್ತ ತೆರಳುತ್ತಿದ್ದ ಲಾರಿ ಹೆದ್ದಾರಿ ಬಿಟ್ಟು ನೇರವಾಗಿ ಸರ್ವಿಸ್ ರಸ್ತೆಗೆ ನುಗ್ಗಿದೆ. ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಆಟೋ ರಿಕ್ಷಾ ಹಾಗು ಬೈಕಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಬೈಕ್ ಸವಾರ ಸಂಗಪ್ಪ ಗಂಭೀರ ಗಾಯಗೊಂಡಿದ್ದಾರೆ. ಲಾಡ್ಜ್ ಒಂದರಲ್ಲಿ ವಾಚ್ಮನ್ ಆಗಿರುವ ಸಂಗಪ್ಪ ತನ್ನ ಮಗಳನ್ನು ಬಸ್ ನಿಲ್ದಾಣಕ್ಕೆ ಬಿಡಲು ಬರುತ್ತಿದ್ದರು. ಮಗಳು ಸವಿತಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾಳೆ.


ಲಾರಿ ತಮ್ಮತ್ತ ನುಗ್ಗಿ ಬರುತ್ತಿದ್ದಾಗಲೇ ರಸ್ತೆ ಬದಿಯಲ್ಲಿ ಕುಳಿತಿದ್ದ ಕೂಲಿ ಕಾರ್ಮಿಕರು ಎದ್ದು ಓಡಿದ್ದಾರೆ. ಹೀಗಾಗಿ ಕೂದಲೆಳೆ ಅಂತರದಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ.
ಲಾರಿ ಡಿಕ್ಕಿಯಾಗಿ ಆಟೋ ರಿಕ್ಷಾ ಪಲ್ಟಿಯಾಗಿ ಬಿದ್ದಿದೆ. ಅದರಲ್ಲಿದ್ದ ಪ್ರಯಾಣಿಕರಿಗೂ ಗಾಯವಾಗಿದೆ. ಡಿಕ್ಕಿ ಹೊಡೆದರೂ ಲಾರಿಯನ್ನು ನಿಲ್ಲಿಸದೆ ಮುಂದಕ್ಕೆ ಹೋಗಿದ್ದು ಮುಲ್ಕಿ ಪೊಲೀಸರು ಬೆನ್ನತ್ತಿ ಲಾರಿ ವಶಕ್ಕೆ ಪಡೆದಿದ್ದು ಚಾಲಕನನ್ನು ಬಂಧಿಸಿದ್ದಾರೆ.
#Mangalore #Mulki truck #accident, video goes viral. Mines truck comes to service road losing control on the highway. Man and his daughter on two wheeler have said to be injured. #BREAKING_NEWS pic.twitter.com/5nQcNMOMXi
— Headline Karnataka (@hknewsonline) December 7, 2023
Mangalore Mulki truck accident, video goes viral. Mines truck comes to service road losing control on the highway. Man and his daughter on two wheeler have said to be injured.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm