ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm