ಬ್ರೇಕಿಂಗ್ ನ್ಯೂಸ್
09-12-23 07:07 pm Mangaluru Correspondent ಕರಾವಳಿ
ಮಂಗಳೂರು, ಡಿ.9: ದಕ್ಷಿಣ ಕನ್ನಡ ಜಿಲ್ಲೆಯ ಸಿಆರ್ಝಡ್ ವ್ಯಾಪ್ತಿಯಲ್ಲಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ಅನಗತ್ಯ ವಿಳಂಬ ನೀತಿಯ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ವಿಶೇಷ ಗಮನ ಸೆಳೆದರು.
ಈಗಾಗಲೇ ದುಬಾರಿ ದರದಿಂದಾಗಿ ಜನಸಾಮಾನ್ಯರಿಗೆ ಮರಳು ಕೈಗೆಟುಕದಿದ್ದು, ಇನ್ನೂ ಸಿಆರ್ಝಡ್ ವಲಯದಲ್ಲಿ ಮರಳುಗಾರಿಕೆ ಆರಂಭಗೊಳ್ಳದಿದ್ದರೆ ಕಟ್ಟಡ ನಿರ್ಮಾಣ ಚಟುವಟಿಕೆಗಳು ಸ್ಥಗಿತಗೊಳ್ಳುವ ಆತಂಕವಿದೆ. ಇದನ್ನೇ ನಂಬಿ ಬದುಕು ನಡೆಸುವ ಕಾರ್ಮಿಕ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಲಿರುವ ಬಗ್ಗೆ, ಆರ್ಥಿಕವಾಗಿ ಜಿಲ್ಲೆಗೆ ನಷ್ಟ ಉಂಟಾಗುವ ಬಗ್ಗೆ ಹಾಗೂ ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಉಂಟಾಗಿರುವ ತೀವ್ರ ಮರಳಿನ ಸಮಸ್ಯೆ ಕುರಿತು ಶಾಸಕ ಕಾಮತ್ ಸದನದ ಗಮನ ಸೆಳೆದರು.
ಜಿಲ್ಲೆಯಲ್ಲಿ ಮರಳುಗಾರಿಕೆ ಸ್ಥಗಿತಗೊಂಡು ಹಲವು ತಿಂಗಳುಗಳೇ ಕಳೆದಿದ್ದು ಅದನ್ನು ಮರಳಿ ಆರಂಭಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಏಳು ಜನ ಸದಸ್ಯರನ್ನೊಳಗೊಂಡ ಸಮಿತಿ, ಪರಿಶೀಲನೆ ನಡೆಸಿ ಅಗತ್ಯ ಕ್ರಮಗಳ ಸಂಪೂರ್ಣ ವರದಿಯನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಆದರೆ ಇಲ್ಲಿಯವರೆಗೆ ಅನುಮತಿ ದೊರೆತಿಲ್ಲ.
ಸದ್ಯ ಜಿಲ್ಲೆಯಲ್ಲಿ ಯಾವುದೇ ಕಾಮಗಾರಿಗೂ ಸಿಆರ್ಝಡ್ ಮರಳು ಲಭ್ಯವಾಗುತ್ತಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾದರೆ ಮತ್ತೆ ಹಲವು ತಿಂಗಳ ಕಾಲ ಮರಳು ಸಿಗದೇ ತೀವ್ರ ಸಂಕಷ್ಟ ಅನುಭವಿಸಬೇಕಾಗುವ ಸ್ಥಿತಿ ಎದುರಾಗಲಿದೆ.
ಈಗಾಗಲೇ ಜಿಲ್ಲಾಡಳಿತದ ಹಂತದಲ್ಲಿ ಎಲ್ಲಾ ಅಗತ್ಯ ಕ್ರಮಗಳನ್ನು ಪೂರೈಸಿ ವರದಿಯನ್ನು ಕಳುಹಿಸಲಾಗಿದ್ದರೂ ಇನ್ನೂ ಸಹ ನಿರಾಕ್ಷೇಪಣಾ (EC) ಪತ್ರ ನೀಡದೇ ಅನಗತ್ಯ ವಿಳಂಬ ನೀತಿ ಅನುಸರಿಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಎಂ ಸ್ಯಾಂಡನ್ನು ರಸ್ತೆ ಅಥವಾ ಇನ್ನಿತರ ಉಪಯೋಗಗಳಿಗಾಗಿ ಮಾತ್ರ ಬಳಸಲಾಗುತ್ತದೆ, ಹೊರತು ಮನೆಗಳ ಕಟ್ಟಡಕ್ಕೆ ಹೆಚ್ಚು ಉಪಯೋಗಿಸುವುದಿಲ್ಲ. ಇದು ಸಭಾಧ್ಯಕ್ಷರಿಗೂ ತಿಳಿದಿರುವ ವಿಚಾರ. ಹಾಗಾಗಿ ಕೂಡಲೇ ನಿರಾಕ್ಷೇಪಣಾ (EC) ಪತ್ರ ನೀಡಿ ಸಾಂಪ್ರದಾಯಿಕ ಮರಳುಗಾರಿಕೆ ಆರಂಭಕ್ಕೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.
MLA Vedavyas kamath talks about sand issue of Mangalore in Assembly
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm