ಬ್ರೇಕಿಂಗ್ ನ್ಯೂಸ್
09-12-23 10:41 pm Mangaluru correspondent ಕರಾವಳಿ
ಮಂಗಳೂರು, ಡಿ.9: ಶ್ಯಾಕ್ಸ್ ಎಂಟರ್ಪ್ರೈಸಸ್ನ ಅಬ್ದುಲ್ ಶಕೀಲ್ ನಿರ್ಮಾಣದ ಬ್ಯಾರಿ ಭಾಷೆಯ ಚಲನಚಿತ್ರ ‘ಮುಸಾಫಿರ್’ಗೆ ‘ಕರ್ನಾಟಕ ನಂದಿ ಫಿಲ್ಮ್ -2023’ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಒರಾಯನ್ ಮಾಲ್ನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ‘ಮುಸಾಫಿರ್’ ಸಿನೆಮಾದ ಮುಖ್ಯ ಪಾತ್ರಧಾರಿ ಮುಹಮ್ಮದ್ ಬಡ್ಡೂರು ಅವರ ಪರವಾಗಿ ಚಲನಚಿತ್ರ ನಿರ್ದೇಶಕ ಅಂಬಳಿಕೆ ರವಿ ಹಾಗೂ ‘ಮುಸಾಫಿರ್’ ಸಿನೆಮಾಕ್ಕೆ ಸಾಹಿತ್ಯ ಬರೆದ ಪತ್ರಕರ್ತ ಹಂಝ ಮಲಾರ್ ಅವರು ‘ಕಾಂತಾರ’ ಸಿನೆಮಾದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಹಂಝ ಮಲಾರ್ ಅವರ ‘ಸೂಫಿ ಬ್ಯಾರಿಯ ಝಕಾತ್ ಯಾತ್ರೆ’ ಕಥೆ ಆಧಾರಿತ ‘ಮುಸಾಫಿರ್’ ಸಿನೆಮಾದಲ್ಲಿ ನಟಿಸಿದ್ದ ಸಾಹಿತಿ ಮುಹಮ್ಮದ್ ಬಡ್ಡೂರ್ ‘ಅಬ್ಬಾ’ ಬ್ಯಾರಿ ಸಿನೆಮಾದಲ್ಲೂ ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ಕನ್ನಡವಲ್ಲದೆ ತುಳು, ಬ್ಯಾರಿ, ಕೊಂಕಣಿ, ಕೊಡವ, ಬಂಜಾರದಂತಹ ರಾಜ್ಯದ ಪ್ರಾದೇಶಿಕ ಭಾಷೆಗಳ ಸಿನೆಮಾವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಚಿತ್ರನಟರಾದ ರವಿಚಂದ್ರನ್, ವಿನೋದ್ ರಾಜ್, ಶ್ರೀನಾಥ್, ಧ್ರುವ ಸರ್ಜಾ, ಉಮಾಶ್ರೀ, ಅನು ಪ್ರಭಾಕರ್, ವಸಿಷ್ಠ ಸಿಂಹ, ಅನಿರುದ್ಧ, ಪ್ರೇಮಾ, ಹರಿಪ್ರಿಯಾ, ಉಲ್ಲಾಸ್ ಹಾಗೂ ಆಯೋಜಕರಾದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾ.ಮಾ.ಹರೀಶ್, ನಿರ್ಮಾಪಕ ನಂದಳಿಕೆ ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಅನಿತಾ ರೆಡ್ಡಿ, ಭಾ.ಮಾ. ಗಿರೀಶ್, ಹರ್ಷಿತಾ, ನಂದಿತಾ, ಅಶೋಕ್ ಮತ್ತಿತರರು ಉಪಸ್ಥಿತರಿದ್ದರು.
Musafir Beary movie bags Karnataka Nandi film award. The award was presented by Kantara Hero and director Rishab Shetty to Hamza Malar
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm