ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm