ಬ್ರೇಕಿಂಗ್ ನ್ಯೂಸ್
10-12-23 12:06 pm Mangalore Correspondent ಕರಾವಳಿ
ಉಳ್ಳಾಲ, ಡಿ.10: ಸೋಮೇಶ್ವರದಲ್ಲಿ ನಿನ್ನೆ ಮಧ್ಯಾಹ್ನ ಸಮುದ್ರ ಪಾಲಾಗಿದ್ದ ಇಬ್ಬರು ಪಿಯು ವಿದ್ಯಾರ್ಥಿಗಳ ಮೃತದೇಹಗಳು ಇಂದು ಬೆಳಗ್ಗೆ ಅದೇ ಸ್ಥಳದಲ್ಲಿ ಪತ್ತೆಯಾಗಿದೆ. ಸೋಮೇಶ್ವರದ ಪರಿಜ್ಞಾನ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಮಂಜೇಶ್ವರ, ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ (17) ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್(17) ಮೃತರು.
ನಿನ್ನೆ ಮಧ್ಯಾಹ್ನದ ಬಳಿಕ ಕಾಲೇಜಿಗೆ ರಜೆ ಇದ್ದ ಕಾರಣ ಯಶ್ವಿತ್ ಮತ್ತು ಯುವರಾಜ್ ಸೇರಿ ಒಟ್ಟು ಆರು ವಿದ್ಯಾರ್ಥಿಗಳು ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಅನ್ನ ಪ್ರಸಾದ ಸ್ವೀಕರಿಸಿ ಪಕ್ಕದ ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಯಶ್ವಿತ್ ಮತ್ತು ಯುವರಾಜ್ ನೀರಾಟಕ್ಕಿಳಿದಿದ್ದು ದೈತ್ಯ ಅಲೆಗಳು ಅವರಿಬ್ಬರನ್ನು ಕೊಚ್ಚಿಕೊಂಡು ಹೋಗಿದೆ. ಸ್ಥಳಕ್ಕೆ ಬಂದಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಪರಿಣಿತ ಈಜುಗಾರರು ರಾತ್ರಿ ವರೆಗೂ ಶೋಧ ನಡೆಸಿದರೂ ನೀರುಪಾಲಾದ ಯುವರಾಜ್, ಯಶ್ವಿತ್ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ಘಟನೆ ನಡೆದ ಸ್ಥಳದಲ್ಲೇ ವಿದ್ಯಾರ್ಥಿಗಳ ಮೃತದೇಹಗಳು ದೊರೆತಿದ್ದು ಉಳ್ಳಾಲ ಪೊಲೀಸರು ದೇರಳಕಟ್ಟೆ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.



ಮೃತ ಇಬ್ಬರು ವಿದ್ಯಾರ್ಥಿಗಳು ಬಡ ಕುಟುಂಬದವರಾಗಿದ್ದು ತಂದೆ, ತಾಯಿ ಏಕೈಕ ಸಹೋದರಿಯರನ್ನ ಅಗಲಿದ್ದಾರೆ. ಸೋಮೇಶ್ವರ ಕಡಲ ಕಿನಾರೆಯಲ್ಲಿ ಪದೇ ಪದೇ ಅವಘಡಗಳು ನಡೆಯುತ್ತಿದ್ದರೂ ಪ್ರವಾಸೋದ್ಯಮ ಇಲಾಖೆ ಇಲ್ಲಿ ಖಾಯಂ ಜೀವ ರಕ್ಷಕ ಸಿಬ್ಬಂದಿಗಳನ್ನ ನೇಮಿಸಿಲ್ಲ. ಕಡಲ ತೀರಕ್ಕೆ ಭೇಟಿ ಕೊಡುವ ಜನರು ಜಾಗರೂಕರಾಗಿರಬೇಕೆಂದು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಬಾಲಕೃಷ್ಣ ಎಚ್ಚರಿಸಿದ್ದಾರೆ.
Mangalore Two students drowned at Someshwar Beach, body found. Two students had drowned into the sea while they were playing with their friends. The body had been found now
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm