ಬ್ರೇಕಿಂಗ್ ನ್ಯೂಸ್
11-12-23 01:51 pm Mangalore Correspondent ಕರಾವಳಿ
ಮಂಗಳೂರು, ಡಿ.10: ನಗರದ ವಳಚ್ಚಿಲ್ ಶ್ರೀನಿವಾಸ ಕಾಲೇಜಿನಲ್ಲಿ ನರ್ಸಿಂಗ್ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೇರಳದ ಆಲಪ್ಪುಳ ಜಿಲ್ಲೆಯ ಕರುವೆಟ್ಟು ನಿವಾಸಿ ಸಚಿನ್ ರಾಜು (19) ಮೃತ ಯುವಕ. ಕಳೆದ ನವೆಂಬರ್ 30ರಂದು ಈತನನ್ನು ಪ್ರಥಮ ವರ್ಷದ ಜನರಲ್ ನರ್ಸಿಂಗ್ ಕಲಿಯಲು ಎ.ಶ್ಯಾಮ ರಾವ್ ನರ್ಸಿಂಗ್ ಕಾಲೇಜಿಗೆ ಸೇರಿಸಲಾಗಿತ್ತು. ಅದರಂತೆ, ವಳಚ್ಚಿಲ್ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದ ಸಚಿನ್ ರಾಜು ಡಿ.8 ರಂದು ಕಾಲೇಜಿಗೆ ಹೋಗಿರಲಿಲ್ಲ. ಆರೋಗ್ಯ ಸರಿಯಿಲ್ಲ ಎಂದು ತರಗತಿ ಹೋಗದೇ ಇದ್ದ ಸಚಿನ್, ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಈತನ ಜೊತೆಗೆ ರೂಮಿನಲ್ಲಿ ಇನ್ನಿಬ್ಬರು ವಿದ್ಯಾರ್ಥಿಗಳು ಇದ್ದರು. ಅಂದು ಮಧ್ಯಾಹ್ನ ಊಟಕ್ಕೆಂದು ಕೊಠಡಿಗೆ ಬಂದಾಗ ಸಚಿನ್ ಬೆಡ್ ಶೀಟನ್ನೇ ತುಂಡರಿಸಿ ಫ್ಯಾನಿಗೆ ಕಟ್ಟಿ ನೇಣು ಬಿಗಿದಿರುವುದು ಕಂಡುಬಂದಿತ್ತು. ಕೂಡಲೇ ನೇಣು ಕುಣಿಕೆಯನ್ನು ತುಂಡರಿಸಿ ಕಾಲೇಜಿನ ಶಿಕ್ಷಕರ ಸಹಾಯದಿಂದ ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಚಿನ್ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಈ ಬಗ್ಗೆ ಸಚಿನ್ ತಂದೆ ಕಂಕನಾಡಿ ಗ್ರಾಮಾಂತರ ಠಾಣೆಗೆ ಬಂದು ದೂರು ನೀಡಿದ್ದಾರೆ. ವಿದ್ಯಾರ್ಥಿ ಸಾವಿಗೇನು ಕಾರಣ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19 year old Nursing college student commits suicide in college hostel at Valachil in Mangalore. The deceased has been identifed as Sachin Raju from Kerala.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm