ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm