ಬ್ರೇಕಿಂಗ್ ನ್ಯೂಸ್
11-12-23 10:36 pm Mangalore Correspondent ಕರಾವಳಿ
ಉಳ್ಳಾಲ, ಡಿ.11: ಮಫ್ತಿಯಲ್ಲಿ ಡ್ರೆಸ್ಸು, ಸೊಂಟಕ್ಕೆ ಪೊಲೀಸ್ ಇಲಾಖೆಯ ವಾಕಿ ಟಾಕಿ.. ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ ಐ ಧನರಾಜ್ ಹೆಲ್ಮೆಟ್ ಧರಿಸದೆ, ಮಫ್ತಿಯಲ್ಲಿದ್ದರೂ ಪೊಲೀಸ್ ವಾಕಿಟಾಕಿ ಹಾಕ್ಕೊಂಡು ಹೆದ್ದಾರಿಯಲ್ಲಿ ರಾಜಾರೋಷವಾಗಿ ಟೂ ವೀಲರ್ ಡ್ರೈವ್ ಮಾಡಿದ್ದು, ಕಾನೂನು ಪಾಲಕರೇ ಕಾನೂನು ಭಂಜನೆ ಮಾಡಿ ಸಿಕ್ಕಿಬಿದ್ದಿದ್ದಾರೆ.
ಸಾಮಾನ್ಯ ಜನರು ಹೆಲ್ಮೆಟ್ ಹಾಕದೇ ಇದ್ದರೆ ದಂಡ ವಿಧಿಸುವ ಪೊಲೀಸ್ ಅಧಿಕಾರಿಯೇ ತಮಗೆ ಕಾನೂನು ಪ್ರತ್ಯೇಕ ಇದೆಯೋ ಎನ್ನುವಂತೆ ವರ್ತಿಸಿದ್ದಾರೆ. ಸೋಮವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಉಳ್ಳಾಲ ಠಾಣೆ ಪಿಎಸ್ಐ ಧನರಾಜ್ ಮಫ್ತಿಯಲ್ಲಿ ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟಿನ ಕಡೆಗೆ ದ್ವಿಚಕ್ರ ವಾಹನ ಚಲಾಯಿಸಿದ್ದಾರೆ. ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯ ಸೊಂಟದಲ್ಲಿ ವಾಕಿ ಟಾಕಿ ಇದ್ದುದನ್ನ ಕಂಡ ಇತರೇ ವಾಹನ ಸವಾರರು ಈತ ಪೊಲೀಸ್ ಎಂದು ಖಾತರಿ ಪಡಿಸಿ ಫೋಟೊ ಕ್ಲಿಕ್ಕಿಸಿದ್ದಾರೆ.

ಪಿಎಸ್ ಐ ಧನರಾಜ್ ಉಳ್ಳಾಲ ಠಾಣೆ ವ್ಯಾಪ್ತಿಯಲ್ಲಿ ಗಸ್ತಿನಲ್ಲಿರುವಾಗ ಸಂಚಾರಿ ಕಾನೂನು ಉಲ್ಲಂಘಿಸುವ ವಾಹನ ಸವಾರರಿಗೆ ಮುಲಾಜಿಲ್ಲದೆ ದಂಡ ವಿಧಿಸುತ್ತಾರಂತೆ. ಆದರೆ ಕಾನೂನು ರಕ್ಷಣೆ ಮಾಡುವ ಹೊಣೆಗಾರಿಕೆಯುಳ್ಳ ಅದೇ ಪಿಎಸ್ ಐ ಈ ರೀತಿ ಹೆದ್ದಾರಿಯಲ್ಲಿ ಕಾನೂನನ್ನ ಗಾಳಿಗೆ ತೂರಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸೋದು ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
ಪಿಎಸ್ ಐ ಧನರಾಜ್ ಅವರ ತಲೆಗೆ ಸಣ್ಣ ಗಾಯವಾಗಿ ಪ್ಲಾಸ್ಟರ್ ಹಾಕಲಾಗಿದೆ. ಅದನ್ನೇ ನೆಪವಾಗಿಸಿ ಕಳೆದ ಕೆಲವು ದಿನಗಳಿಂದ ಹೆಲ್ಮೆಟ್ ರಹಿತ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದಾರೆ. ಈ ಬಗ್ಗೆ ನಾವು ಬುದ್ದಿ ಹೇಳಿದರೂ ಕೇಳುತ್ತಿಲ್ಲವೆಂದು ಉಳ್ಳಾಲ ಠಾಣೆಯ ಸಿಬ್ಬಂದಿಗಳು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ. ತಲೆಗೆ ಗಾಯವಾಗಿದೆ ಎಂದು ಜನರಿಗೆಲ್ಲ ಒಂದೇ ರೀತಿ ಇರುವ ಕಾನೂನನ್ನು ಪೊಲೀಸರು ಉಲ್ಲಂಘನೆ ಮಾಡಲಾಗುತ್ತದೆಯೇ ? ಸಾಮಾನ್ಯ ಜನರು ಇದೇ ರೀತಿ ವರ್ತಿಸಿದರೆ, ಪೊಲೀಸರು ಹಾಗೇ ಬಿಡುತ್ತಾರೆಯೇ? ಮಂಗಳೂರು ಪೊಲೀಸ್ ಆಯುಕ್ತರು ಈ ಬಗ್ಗೆ ಏನು ಹೇಳುತ್ತಾರೋ..? ಈ ಸುದ್ದಿ ಅವರ ಕಿವಿಗೂ ತಲುಪದೆ ಇರಲಾರದು.
Mangalore Ullal Police PSI Dhanraj photo without helmet goes viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm