ಬ್ರೇಕಿಂಗ್ ನ್ಯೂಸ್
11-12-23 11:05 pm Mangalore Correspondent ಕರಾವಳಿ
ಮಂಗಳೂರು, ಡಿ.11: ನಟೋರಿಯಸ್ ರೌಡಿ, ಟಾರ್ಗೆಟ್ ಇಲ್ಯಾಸ್ ಗ್ಯಾಂಗ್ ಮುನ್ನಡೆಸುತ್ತಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಐವರನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಆರೋಪದಿಂದ ಖುಲಾಸೆಗೊಳಿಸಿದೆ.
ದಾವೂದ್, ಶಮೀರ್, ನಮೀರ್, ರಿಯಾಜ್ ಮತ್ತು ಅಬ್ದುಲ್ ಖಾದರ್ ಆರೋಪದಿಂದ ಖುಲಾಸೆಯಾದವರು. 2018ರ ಡಿಸೆಂಬರಿನಲ್ಲಿ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಬಪ್ಪಾಲ್ ನಲ್ಲಿ ಹೆಂಡ್ತಿ ಮನೆಯಲ್ಲಿದ್ದಾಗಲೇ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಕಡಿದು ಭೀಕರ ಹತ್ಯೆ ಮಾಡಿದ್ದರು. ಕೃತ್ಯದ ಬಗ್ಗೆ ಪಾಂಡೇಶ್ವರ ಇನ್ಸ್ ಪೆಕ್ಟರ್ ಆಗಿದ್ದ ಕೆಯು ಬೆಳ್ಳಿಯಪ್ಪ ತನಿಖೆ ನಡೆಸಿದ್ದರು.
ಪ್ರಕರಣದಲ್ಲಿ 9 ಮಂದಿ ಆರೋಪಿಗಳನ್ನು ಗುರುತಿಸಲಾಗಿತ್ತು. ದಾವೂದ್ ಮತ್ತು ಮಹಮ್ಮದ್ ಶಮೀರ್ ಪ್ರಮುಖ ಆರೋಪಿಗಳೆಂದು ಹೇಳಲಾಗಿತ್ತು. 54 ಮಂದಿಯ ಸಾಕ್ಷ್ಯವನ್ನು ಒಳಗೊಂಡು ಸಮಗ್ರ ಚಾರ್ಜ್ ಶೀಟನ್ನು ಕೋರ್ಟಿಗೆ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಘಟನೆಗೆ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೃತ ಇಲ್ಯಾಸ್ ಭಾವ ಮತ್ತು ಅತ್ತೆಯನ್ನು ಒಳಗೊಂಡಂತೆ 25 ಮಂದಿ ಸಾಕ್ಷಿಗಳನ್ನು ಕರೆಸಿತ್ತು. ಟಾರ್ಗೆಟ್ ಗ್ಯಾಂಗಿನಲ್ಲೇ ಇದ್ದ ದಾವೂದ್ ಮತ್ತು ಸಮೀರ್ ಹಳೆ ವೈರತ್ವದಿಂದ ಇಲ್ಯಾಸನ್ನು ಕೊಲೆ ಮಾಡಿದ್ದಾಗಿ ಚಾರ್ಜ್ ಶೀಟಿನಲ್ಲಿ ತಿಳಿಸಲಾಗಿತ್ತು.
ಜಿನೇಂದ್ರ ಕುಮಾರ್ ನೇತೃತ್ವದ ವಕೀಲರ ತಂಡವು ಆರೋಪಿಗಳ ಪರ ವಾದಿಸಿ, ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಸವಾಲು ಮಾಡಿ ವಕಾಲತ್ತಿನಲ್ಲಿ ಸೋಲಿಸಿದೆ. ಇದನ್ನು ಪರಿಗಣಿಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬಂಧಿಸಲ್ಪಟ್ಟಿದ್ದ ಐವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಉಮರ್ ನವಾಫ್, ಮೊಹಮ್ಮದ್ ನಝೀರ್, ಅಸ್ಗರ್ ಆಲಿ, ನೌಶಾದ್ ಎಂಬವರು ಈವರೆಗೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
The Third Additional District and Sessions judge acquitted five accused on Monday, December 11, in target Ilyas murder case at Jeppu in 2018. The judgement was announced by district and sessions judge Sandhya S.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm