ಬ್ರೇಕಿಂಗ್ ನ್ಯೂಸ್
11-12-23 11:05 pm Mangalore Correspondent ಕರಾವಳಿ
ಮಂಗಳೂರು, ಡಿ.11: ನಟೋರಿಯಸ್ ರೌಡಿ, ಟಾರ್ಗೆಟ್ ಇಲ್ಯಾಸ್ ಗ್ಯಾಂಗ್ ಮುನ್ನಡೆಸುತ್ತಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಐವರನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಆರೋಪದಿಂದ ಖುಲಾಸೆಗೊಳಿಸಿದೆ.
ದಾವೂದ್, ಶಮೀರ್, ನಮೀರ್, ರಿಯಾಜ್ ಮತ್ತು ಅಬ್ದುಲ್ ಖಾದರ್ ಆರೋಪದಿಂದ ಖುಲಾಸೆಯಾದವರು. 2018ರ ಡಿಸೆಂಬರಿನಲ್ಲಿ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಬಪ್ಪಾಲ್ ನಲ್ಲಿ ಹೆಂಡ್ತಿ ಮನೆಯಲ್ಲಿದ್ದಾಗಲೇ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಕಡಿದು ಭೀಕರ ಹತ್ಯೆ ಮಾಡಿದ್ದರು. ಕೃತ್ಯದ ಬಗ್ಗೆ ಪಾಂಡೇಶ್ವರ ಇನ್ಸ್ ಪೆಕ್ಟರ್ ಆಗಿದ್ದ ಕೆಯು ಬೆಳ್ಳಿಯಪ್ಪ ತನಿಖೆ ನಡೆಸಿದ್ದರು.
ಪ್ರಕರಣದಲ್ಲಿ 9 ಮಂದಿ ಆರೋಪಿಗಳನ್ನು ಗುರುತಿಸಲಾಗಿತ್ತು. ದಾವೂದ್ ಮತ್ತು ಮಹಮ್ಮದ್ ಶಮೀರ್ ಪ್ರಮುಖ ಆರೋಪಿಗಳೆಂದು ಹೇಳಲಾಗಿತ್ತು. 54 ಮಂದಿಯ ಸಾಕ್ಷ್ಯವನ್ನು ಒಳಗೊಂಡು ಸಮಗ್ರ ಚಾರ್ಜ್ ಶೀಟನ್ನು ಕೋರ್ಟಿಗೆ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಘಟನೆಗೆ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೃತ ಇಲ್ಯಾಸ್ ಭಾವ ಮತ್ತು ಅತ್ತೆಯನ್ನು ಒಳಗೊಂಡಂತೆ 25 ಮಂದಿ ಸಾಕ್ಷಿಗಳನ್ನು ಕರೆಸಿತ್ತು. ಟಾರ್ಗೆಟ್ ಗ್ಯಾಂಗಿನಲ್ಲೇ ಇದ್ದ ದಾವೂದ್ ಮತ್ತು ಸಮೀರ್ ಹಳೆ ವೈರತ್ವದಿಂದ ಇಲ್ಯಾಸನ್ನು ಕೊಲೆ ಮಾಡಿದ್ದಾಗಿ ಚಾರ್ಜ್ ಶೀಟಿನಲ್ಲಿ ತಿಳಿಸಲಾಗಿತ್ತು.
ಜಿನೇಂದ್ರ ಕುಮಾರ್ ನೇತೃತ್ವದ ವಕೀಲರ ತಂಡವು ಆರೋಪಿಗಳ ಪರ ವಾದಿಸಿ, ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಸವಾಲು ಮಾಡಿ ವಕಾಲತ್ತಿನಲ್ಲಿ ಸೋಲಿಸಿದೆ. ಇದನ್ನು ಪರಿಗಣಿಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬಂಧಿಸಲ್ಪಟ್ಟಿದ್ದ ಐವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಉಮರ್ ನವಾಫ್, ಮೊಹಮ್ಮದ್ ನಝೀರ್, ಅಸ್ಗರ್ ಆಲಿ, ನೌಶಾದ್ ಎಂಬವರು ಈವರೆಗೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
The Third Additional District and Sessions judge acquitted five accused on Monday, December 11, in target Ilyas murder case at Jeppu in 2018. The judgement was announced by district and sessions judge Sandhya S.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm