ಬ್ರೇಕಿಂಗ್ ನ್ಯೂಸ್
11-12-23 11:05 pm Mangalore Correspondent ಕರಾವಳಿ
ಮಂಗಳೂರು, ಡಿ.11: ನಟೋರಿಯಸ್ ರೌಡಿ, ಟಾರ್ಗೆಟ್ ಇಲ್ಯಾಸ್ ಗ್ಯಾಂಗ್ ಮುನ್ನಡೆಸುತ್ತಿದ್ದ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದ ಐವರನ್ನು ನ್ಯಾಯಾಲಯ ಸಾಕ್ಷ್ಯಾಧಾರ ಕೊರತೆಯಿಂದ ಆರೋಪದಿಂದ ಖುಲಾಸೆಗೊಳಿಸಿದೆ.
ದಾವೂದ್, ಶಮೀರ್, ನಮೀರ್, ರಿಯಾಜ್ ಮತ್ತು ಅಬ್ದುಲ್ ಖಾದರ್ ಆರೋಪದಿಂದ ಖುಲಾಸೆಯಾದವರು. 2018ರ ಡಿಸೆಂಬರಿನಲ್ಲಿ ಟಾರ್ಗೆಟ್ ಇಲ್ಯಾಸ್ ನನ್ನು ಕಂಕನಾಡಿಯ ಜೆಪ್ಪು ಬಪ್ಪಾಲ್ ನಲ್ಲಿ ಹೆಂಡ್ತಿ ಮನೆಯಲ್ಲಿದ್ದಾಗಲೇ ಬೆಳ್ಳಂಬೆಳಗ್ಗೆ ದುಷ್ಕರ್ಮಿಗಳು ಕಡಿದು ಭೀಕರ ಹತ್ಯೆ ಮಾಡಿದ್ದರು. ಕೃತ್ಯದ ಬಗ್ಗೆ ಪಾಂಡೇಶ್ವರ ಇನ್ಸ್ ಪೆಕ್ಟರ್ ಆಗಿದ್ದ ಕೆಯು ಬೆಳ್ಳಿಯಪ್ಪ ತನಿಖೆ ನಡೆಸಿದ್ದರು.
ಪ್ರಕರಣದಲ್ಲಿ 9 ಮಂದಿ ಆರೋಪಿಗಳನ್ನು ಗುರುತಿಸಲಾಗಿತ್ತು. ದಾವೂದ್ ಮತ್ತು ಮಹಮ್ಮದ್ ಶಮೀರ್ ಪ್ರಮುಖ ಆರೋಪಿಗಳೆಂದು ಹೇಳಲಾಗಿತ್ತು. 54 ಮಂದಿಯ ಸಾಕ್ಷ್ಯವನ್ನು ಒಳಗೊಂಡು ಸಮಗ್ರ ಚಾರ್ಜ್ ಶೀಟನ್ನು ಕೋರ್ಟಿಗೆ ಸಲ್ಲಿಕೆ ಮಾಡಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ಘಟನೆಗೆ ಪ್ರತ್ಯಕ್ಷ ದರ್ಶಿಗಳಾಗಿದ್ದ ಮೃತ ಇಲ್ಯಾಸ್ ಭಾವ ಮತ್ತು ಅತ್ತೆಯನ್ನು ಒಳಗೊಂಡಂತೆ 25 ಮಂದಿ ಸಾಕ್ಷಿಗಳನ್ನು ಕರೆಸಿತ್ತು. ಟಾರ್ಗೆಟ್ ಗ್ಯಾಂಗಿನಲ್ಲೇ ಇದ್ದ ದಾವೂದ್ ಮತ್ತು ಸಮೀರ್ ಹಳೆ ವೈರತ್ವದಿಂದ ಇಲ್ಯಾಸನ್ನು ಕೊಲೆ ಮಾಡಿದ್ದಾಗಿ ಚಾರ್ಜ್ ಶೀಟಿನಲ್ಲಿ ತಿಳಿಸಲಾಗಿತ್ತು.
ಜಿನೇಂದ್ರ ಕುಮಾರ್ ನೇತೃತ್ವದ ವಕೀಲರ ತಂಡವು ಆರೋಪಿಗಳ ಪರ ವಾದಿಸಿ, ಪೊಲೀಸರು ಸಲ್ಲಿಸಿದ್ದ ಸಾಕ್ಷ್ಯಾಧಾರಗಳನ್ನು ಸವಾಲು ಮಾಡಿ ವಕಾಲತ್ತಿನಲ್ಲಿ ಸೋಲಿಸಿದೆ. ಇದನ್ನು ಪರಿಗಣಿಸಿದ ಜಿಲ್ಲಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಬಂಧಿಸಲ್ಪಟ್ಟಿದ್ದ ಐವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಉಮರ್ ನವಾಫ್, ಮೊಹಮ್ಮದ್ ನಝೀರ್, ಅಸ್ಗರ್ ಆಲಿ, ನೌಶಾದ್ ಎಂಬವರು ಈವರೆಗೂ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾರೆ.
The Third Additional District and Sessions judge acquitted five accused on Monday, December 11, in target Ilyas murder case at Jeppu in 2018. The judgement was announced by district and sessions judge Sandhya S.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm