ಬ್ರೇಕಿಂಗ್ ನ್ಯೂಸ್
12-12-23 09:17 pm Mangalore Correspondent ಕರಾವಳಿ
ಮಂಗಳೂರು, ಡಿ.12: ಮಂಗಳಾ ಸ್ಟೇಡಿಯಂ ಆವರಣದಲ್ಲಿರುವ ಈಜು ಕೊಳದಲ್ಲಿ ಯುವಕನೊಬ್ಬ ಈಜುತ್ತಿದ್ದಾಗಲೇ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರ್ಯಾಣದ ಗುರ್ಗಾಂವ್ ಮೂಲದ ಅಭಿಷೇಕ್ ಆನಂದ್ (30) ಎನ್ನುವ ಯುವಕ ಮೃತ ವ್ಯಕ್ತಿ. ಸಂಜೆ 5 ಗಂಟೆಯ ವೇಳೆಗೆ ಅಭಿಷೇಕ್ ಈಜು ಕೊಳಕ್ಕೆ ಬಂದಿದ್ದು ಟಿಕೇಟ್ ಪಡೆದು ಈಜಲು ಮುಂದಾಗಿದ್ದ. ಇದೇ ವೇಳೆ, ಅಭಿಷೇಕ್ ಈಜು ಬಾರದೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ ಎನ್ನಲಾಗುತ್ತಿದೆ.
ಆರು ಗಂಟೆಯ ವೇಳೆಗೆ ಮಕ್ಕಳು ಈಜುತ್ತಿದ್ದಾಗ ನೀರಿನ ಅಡಿಯಲ್ಲಿ ಮುಳುಗಿದ್ದ ವ್ಯಕ್ತಿಯನ್ನು ಗಮನಿಸಿ ಕೋಚ್ ಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದ್ದಾರೆ. ಅಲ್ಲದೆ, ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅಭಿಷೇಕ್ ಮಂಗಳೂರಿನಲ್ಲಿ ಗ್ಯಾರೇಜ್ ಒಂದರಲ್ಲಿ ಕೆಲಸಕ್ಕಿದ್ದು, ಕೆಲವೊಮ್ಮೆ ಈಜು ಕೊಳಕ್ಕೆ ಬರುತ್ತಿದ್ದ ಎನ್ನುವ ಮಾಹಿತಿ ಅಲ್ಲಿನ ಸಿಬಂದಿಯಿಂದ ತಿಳಿದುಬಂದಿದೆ.
ಅಭಿಷೇಕ್ ಮಂಗಳೂರಿನಲ್ಲಿ ಯಾವುದೇ ಸಂಬಂಧಿಕರನ್ನು ಹೊಂದಿಲ್ಲ. ಹೀಗಾಗಿ ಆತನ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮಹಾನಗರ ಪಾಲಿಕೆಯಿಂದ ನಿರ್ವಹಿಸಲ್ಪಡುವ ಮಂಗಳಾ ಈಜು ಕೊಳದಲ್ಲಿ ಸಾರ್ವಜನಿಕರು, ಮಕ್ಕಳು ಈಜುತ್ತಿರುವಾಗ ನೋಡಿಕೊಳ್ಳಲು ಸಿಬಂದಿ ಇರುತ್ತಾರೆ. ಯಾವುದೇ ಅಪಾಯಗಳಾದಲ್ಲಿ ಮುಂಜಾಗ್ರತೆ ವಹಿಸಲು ಲೈಫ್ ಗಾರ್ಡ್ ಇರುತ್ತಾರೆ. ಆದರೂ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಸಿಬಂದಿ ನಿರ್ಲಕ್ಷ್ಯ ಎನ್ನಬೇಕಷ್ಟೆ. ಸಾರ್ವಜನಿಕ ಪ್ರವೇಶ ಇರುವ ಸಂಜೆ ಹೊತ್ತಿಗೆ ಬಹಳಷ್ಟು ಮಂದಿ ಈಜು ಕಲಿಯಲು ಬರುತ್ತಿದ್ದು ಟಿಕೆಟ್ ಪಡೆದು ತಮ್ಮಷ್ಟಕ್ಕೆ ಈಜಲು ಪ್ರಯತ್ನ ಪಡುತ್ತಾರೆ. ಇಂಥ ಸಂದರ್ಭದಲ್ಲಿಯೇ ಅಭಿಷೇಕ್ ನೀರಿನಾಳದಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆಯಿದೆ.
Gurgaon, Haryana native drowns at Mangala swimming pool in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm