ಬ್ರೇಕಿಂಗ್ ನ್ಯೂಸ್
12-12-23 09:17 pm Mangalore Correspondent ಕರಾವಳಿ
ಮಂಗಳೂರು, ಡಿ.12: ಮಂಗಳಾ ಸ್ಟೇಡಿಯಂ ಆವರಣದಲ್ಲಿರುವ ಈಜು ಕೊಳದಲ್ಲಿ ಯುವಕನೊಬ್ಬ ಈಜುತ್ತಿದ್ದಾಗಲೇ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರ್ಯಾಣದ ಗುರ್ಗಾಂವ್ ಮೂಲದ ಅಭಿಷೇಕ್ ಆನಂದ್ (30) ಎನ್ನುವ ಯುವಕ ಮೃತ ವ್ಯಕ್ತಿ. ಸಂಜೆ 5 ಗಂಟೆಯ ವೇಳೆಗೆ ಅಭಿಷೇಕ್ ಈಜು ಕೊಳಕ್ಕೆ ಬಂದಿದ್ದು ಟಿಕೇಟ್ ಪಡೆದು ಈಜಲು ಮುಂದಾಗಿದ್ದ. ಇದೇ ವೇಳೆ, ಅಭಿಷೇಕ್ ಈಜು ಬಾರದೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ ಎನ್ನಲಾಗುತ್ತಿದೆ.
ಆರು ಗಂಟೆಯ ವೇಳೆಗೆ ಮಕ್ಕಳು ಈಜುತ್ತಿದ್ದಾಗ ನೀರಿನ ಅಡಿಯಲ್ಲಿ ಮುಳುಗಿದ್ದ ವ್ಯಕ್ತಿಯನ್ನು ಗಮನಿಸಿ ಕೋಚ್ ಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದ್ದಾರೆ. ಅಲ್ಲದೆ, ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅಭಿಷೇಕ್ ಮಂಗಳೂರಿನಲ್ಲಿ ಗ್ಯಾರೇಜ್ ಒಂದರಲ್ಲಿ ಕೆಲಸಕ್ಕಿದ್ದು, ಕೆಲವೊಮ್ಮೆ ಈಜು ಕೊಳಕ್ಕೆ ಬರುತ್ತಿದ್ದ ಎನ್ನುವ ಮಾಹಿತಿ ಅಲ್ಲಿನ ಸಿಬಂದಿಯಿಂದ ತಿಳಿದುಬಂದಿದೆ.
ಅಭಿಷೇಕ್ ಮಂಗಳೂರಿನಲ್ಲಿ ಯಾವುದೇ ಸಂಬಂಧಿಕರನ್ನು ಹೊಂದಿಲ್ಲ. ಹೀಗಾಗಿ ಆತನ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮಹಾನಗರ ಪಾಲಿಕೆಯಿಂದ ನಿರ್ವಹಿಸಲ್ಪಡುವ ಮಂಗಳಾ ಈಜು ಕೊಳದಲ್ಲಿ ಸಾರ್ವಜನಿಕರು, ಮಕ್ಕಳು ಈಜುತ್ತಿರುವಾಗ ನೋಡಿಕೊಳ್ಳಲು ಸಿಬಂದಿ ಇರುತ್ತಾರೆ. ಯಾವುದೇ ಅಪಾಯಗಳಾದಲ್ಲಿ ಮುಂಜಾಗ್ರತೆ ವಹಿಸಲು ಲೈಫ್ ಗಾರ್ಡ್ ಇರುತ್ತಾರೆ. ಆದರೂ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಸಿಬಂದಿ ನಿರ್ಲಕ್ಷ್ಯ ಎನ್ನಬೇಕಷ್ಟೆ. ಸಾರ್ವಜನಿಕ ಪ್ರವೇಶ ಇರುವ ಸಂಜೆ ಹೊತ್ತಿಗೆ ಬಹಳಷ್ಟು ಮಂದಿ ಈಜು ಕಲಿಯಲು ಬರುತ್ತಿದ್ದು ಟಿಕೆಟ್ ಪಡೆದು ತಮ್ಮಷ್ಟಕ್ಕೆ ಈಜಲು ಪ್ರಯತ್ನ ಪಡುತ್ತಾರೆ. ಇಂಥ ಸಂದರ್ಭದಲ್ಲಿಯೇ ಅಭಿಷೇಕ್ ನೀರಿನಾಳದಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆಯಿದೆ.
Gurgaon, Haryana native drowns at Mangala swimming pool in Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm