ಬ್ರೇಕಿಂಗ್ ನ್ಯೂಸ್
12-12-23 09:17 pm Mangalore Correspondent ಕರಾವಳಿ
ಮಂಗಳೂರು, ಡಿ.12: ಮಂಗಳಾ ಸ್ಟೇಡಿಯಂ ಆವರಣದಲ್ಲಿರುವ ಈಜು ಕೊಳದಲ್ಲಿ ಯುವಕನೊಬ್ಬ ಈಜುತ್ತಿದ್ದಾಗಲೇ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.
ಹರ್ಯಾಣದ ಗುರ್ಗಾಂವ್ ಮೂಲದ ಅಭಿಷೇಕ್ ಆನಂದ್ (30) ಎನ್ನುವ ಯುವಕ ಮೃತ ವ್ಯಕ್ತಿ. ಸಂಜೆ 5 ಗಂಟೆಯ ವೇಳೆಗೆ ಅಭಿಷೇಕ್ ಈಜು ಕೊಳಕ್ಕೆ ಬಂದಿದ್ದು ಟಿಕೇಟ್ ಪಡೆದು ಈಜಲು ಮುಂದಾಗಿದ್ದ. ಇದೇ ವೇಳೆ, ಅಭಿಷೇಕ್ ಈಜು ಬಾರದೆ ನೀರಿನಲ್ಲಿ ಮುಳುಗಡೆಯಾಗಿದ್ದಾನೆ ಎನ್ನಲಾಗುತ್ತಿದೆ.
ಆರು ಗಂಟೆಯ ವೇಳೆಗೆ ಮಕ್ಕಳು ಈಜುತ್ತಿದ್ದಾಗ ನೀರಿನ ಅಡಿಯಲ್ಲಿ ಮುಳುಗಿದ್ದ ವ್ಯಕ್ತಿಯನ್ನು ಗಮನಿಸಿ ಕೋಚ್ ಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಆತನನ್ನು ನೀರಿನಿಂದ ಮೇಲಕ್ಕೆತ್ತಿ ಪ್ರಥಮ ಚಿಕಿತ್ಸೆ ನೀಡಿ ಬದುಕಿಸಲು ಯತ್ನಿಸಿದ್ದಾರೆ. ಅಲ್ಲದೆ, ವೆನ್ಲಾಕ್ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅಭಿಷೇಕ್ ಮಂಗಳೂರಿನಲ್ಲಿ ಗ್ಯಾರೇಜ್ ಒಂದರಲ್ಲಿ ಕೆಲಸಕ್ಕಿದ್ದು, ಕೆಲವೊಮ್ಮೆ ಈಜು ಕೊಳಕ್ಕೆ ಬರುತ್ತಿದ್ದ ಎನ್ನುವ ಮಾಹಿತಿ ಅಲ್ಲಿನ ಸಿಬಂದಿಯಿಂದ ತಿಳಿದುಬಂದಿದೆ.
ಅಭಿಷೇಕ್ ಮಂಗಳೂರಿನಲ್ಲಿ ಯಾವುದೇ ಸಂಬಂಧಿಕರನ್ನು ಹೊಂದಿಲ್ಲ. ಹೀಗಾಗಿ ಆತನ ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮಹಾನಗರ ಪಾಲಿಕೆಯಿಂದ ನಿರ್ವಹಿಸಲ್ಪಡುವ ಮಂಗಳಾ ಈಜು ಕೊಳದಲ್ಲಿ ಸಾರ್ವಜನಿಕರು, ಮಕ್ಕಳು ಈಜುತ್ತಿರುವಾಗ ನೋಡಿಕೊಳ್ಳಲು ಸಿಬಂದಿ ಇರುತ್ತಾರೆ. ಯಾವುದೇ ಅಪಾಯಗಳಾದಲ್ಲಿ ಮುಂಜಾಗ್ರತೆ ವಹಿಸಲು ಲೈಫ್ ಗಾರ್ಡ್ ಇರುತ್ತಾರೆ. ಆದರೂ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದು ಸಿಬಂದಿ ನಿರ್ಲಕ್ಷ್ಯ ಎನ್ನಬೇಕಷ್ಟೆ. ಸಾರ್ವಜನಿಕ ಪ್ರವೇಶ ಇರುವ ಸಂಜೆ ಹೊತ್ತಿಗೆ ಬಹಳಷ್ಟು ಮಂದಿ ಈಜು ಕಲಿಯಲು ಬರುತ್ತಿದ್ದು ಟಿಕೆಟ್ ಪಡೆದು ತಮ್ಮಷ್ಟಕ್ಕೆ ಈಜಲು ಪ್ರಯತ್ನ ಪಡುತ್ತಾರೆ. ಇಂಥ ಸಂದರ್ಭದಲ್ಲಿಯೇ ಅಭಿಷೇಕ್ ನೀರಿನಾಳದಲ್ಲಿ ಮುಳುಗಿ ಮೃತಪಟ್ಟಿರುವ ಸಾಧ್ಯತೆಯಿದೆ.
Gurgaon, Haryana native drowns at Mangala swimming pool in Mangalore.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm