ಬ್ರೇಕಿಂಗ್ ನ್ಯೂಸ್
13-12-23 10:00 pm Mangalore Correspondent ಕರಾವಳಿ
ಮಂಗಳೂರು, ಡಿ.13: ನಗರದ ಮಂಗಳಾದೇವಿ ದೇವಸ್ಥಾನವನ್ನು ಗೂಗಲ್ ಮ್ಯಾಪ್ ನಲ್ಲಿ ಮುಸ್ಲಿಂ ವ್ಯಕ್ತಿಯ ಕಂಪೌಂಡ್ ಎನ್ನುವ ರೀತಿ ಕಿಡಿಗೇಡಿಗಳು ತೋರಿಸಿದ್ದು, ಈ ಬಗ್ಗೆ ಭಕ್ತರ ಮೂಲಕ ತಿಳಿದ ದೇವಸ್ಥಾನದ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದೆ.
ಬೆಂಗಳೂರು ಕಡೆಯಿಂದ ಬಂದಿದ್ದ ಭಕ್ತರು ಗೂಗಲ್ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನವನ್ನು ಹುಡುಕಿ ಬಂದಿದ್ದರು. ಆದರೆ ಮ್ಯಾಪ್ ನಲ್ಲಿ ಮಂಗಳಾದೇವಿ ದೇವಸ್ಥಾನ ಇರುವ ಜಾಗವನ್ನು ಬೋಳಾರ್ ಉಮ್ಮರ್ ಶೇಖ್ ಕಂಪೌಂಡ್ ಎಂದು ತೋರಿಸಲಾಗಿತ್ತು. ದೇವಸ್ಥಾನ ರಸ್ತೆ ಎದುರಲ್ಲೇ ಇದ್ದರೂ, ಅದನ್ನು ಮುಸ್ಲಿಂ ವ್ಯಕ್ತಿಯ ಪ್ರಾಪರ್ಟಿ ಅನ್ನುವ ರೀತಿ ತೋರಿಸಿದ್ದರಿಂದ ದಿಗಿಲುಗೊಂಡ ಭಕ್ತರು ದೇವಸ್ಥಾನ ಸಿಬಂದಿಗೆ ತಿಳಿಸಿದ್ದರು.

ಗೂಗಲ್ ಮ್ಯಾಪ್ ಪರಿಶೀಲಿಸಿದಾಗ, ಉಮರ್ ಶೇಖ್ ಕಂಪೌಂಡ್ ಎಂದು ತೋರಿಸುತ್ತಿತ್ತು. ಯಾರೋ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಈ ರೀತಿಯಾಗಿ ಗೂಗಲ್ ಮ್ಯಾಪ್ ನಲ್ಲಿ ಬಿಂಬಿಸಿದ್ದರು. ಈ ಬಗ್ಗೆ ಪೊಲೀಸರು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಮಂಗಳಾದೇವಿ ದೇವಸ್ಥಾನದ ಮ್ಯಾನೇಜರ್ ರಂಜಿತ್ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ರೀತಿ ಬಿಂಬಿಸಿ ಮಂಗಳಾದೇವಿ ದೇವಸ್ಥಾನದ ಪಾವಿತ್ರ್ಯಕ್ಕೆ ಧಕ್ಕೆ ತಂದಿದ್ದಾರೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳಬೇಕು ಅಲ್ಲದೆ, ಮಂಗಳಾದೇವಿ ಮಹತೋಭಾರ ದೇವಸ್ಥಾನ ಎಂದೇ ಗೂಗಲ್ ಮ್ಯಾಪ್ ನಲ್ಲಿ ಸರಿಪಡಿಸಬೇಕು ಎಂದು ಮನವಿಯಲ್ಲಿ ಭಕ್ತರು ಒತ್ತಾಯಿಸಿದ್ದಾರೆ.
Misnaming of Mangaladevi temple on Google Maps rectified after complaint in Mangalore. Unknown miscreants recently altered the name of the location housing the Mangaladevi temple on Google Maps, renaming it as ‘Bolar Shaikh Ummar Saheb Compound’. The compound, located just 200 meters away from the revered temple, raised concerns among the temple management committee and devotees.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm