ಬ್ರೇಕಿಂಗ್ ನ್ಯೂಸ್
17-11-20 11:09 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 17: ಪ್ರಸಿದ್ಧ ವ್ಯಕ್ತಿಗಳ ಹೆಸರಲ್ಲಿ ನಕಲಿ ಐಡಿ ಕ್ರಿಯೇಟ್ ಮಾಡಿ ಹಣ ಪೀಕಿಸುವ ಖದೀಮರು ಹೆಚ್ಚುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಉಪಾಯುಕ್ತರಾಗಿರುವ ಐಎಎಸ್ ಅಧಿಕಾರಿ ಡಾ.ಸಂತೋಷ್ ಕುಮಾರ್ ಹೆಸರಲ್ಲಿ ನಕಲಿ ಐಡಿ ಸೃಷ್ಟಿಸಿ ಹಲವರಿಂದ ಹಣ ಪೀಕಿಸ್ತಿರುವ ವಿಚಾರ ಬೆಳಕಿಗೆ ಬಂದಿದೆ.
ಸಂತೋಷ್ ಕುಮಾರ್ ಹೆಸರಿನಲ್ಲಿ ಅವರದೇ ಒರಿಜಿನಲ್ ಐಡಿಯಲ್ಲಿರುವ ಫೋಟೊ ಮತ್ತು ಹೆಸರು, ಹುದ್ದೆಯನ್ನು ಬಳಸಿಕೊಂಡು ಮತ್ತೊಂದು ಫೇಸ್ಬುಕ್ ಐಡಿ ಕ್ರಿಯೇಟ್ ಮಾಡಲಾಗಿದೆ. ಅಲ್ಲದೆ, ಅವರ ಸ್ನೇಹಿತರ ಲಿಸ್ಟ್ ಸಂಗ್ರಹಿಸಿ, ಹಣದ ಅಗತ್ಯ ಇರುವುದನ್ನು ಮನವರಿಕೆ ಮಾಡಿ ಹಣ ಕೇಳುತ್ತಿರುವುದು ಬಯಲಾಗಿದೆ.

ಸ್ನೇಹಿತನ ಮಗುವಿಗೆ ಹುಷಾರಿಲ್ಲ , ಸೀರಿಯಸ್ ಆಗಿದೆ. ಹತ್ತಿರದ ಸಂಬಂಧಿಕರು ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ತುರ್ತು ಹಣದ ಅಗತ್ಯ ಇದೆ. ಗೂಗಲ್ ಪೇ ಇದ್ದರೆ ಆದಷ್ಟು ಬೇಗ ಹಣ ರವಾನಿಸಿ. ಬೆಳಗ್ಗೆ ಹಿಂತಿರುಗಿಸುತ್ತೇನೆ... ಹೀಗೆಂದು ಸ್ನೇಹಿತರಿಗೆ ಮೆಸೆಂಜರ್ ಮೂಲಕ ಸಂದೇಶ ಕಳಿಸುವ ನಕಲಿ ವ್ಯಕ್ತಿ ಹಲವರ ಬಳಿಯಿಂದ ಹಣ ಲಪಟಾಯಿಸಿರುವ ಮಾಹಿತಿಯಿದೆ.

ಆಯುಕ್ತರಿಗೆ ಫೇಸ್ಬುಕ್ ಫ್ರೆಂಡ್ ಆಗಿರುವ ಮಾಧ್ಯಮದ ವ್ಯಕ್ತಿಯೊಬ್ಬರಿಗೆ ಇದೇ ರೀತಿಯ ಮೆಸೇಜ್ ಬಂದಿತ್ತು. ಹಣದ ಅಗತ್ಯ ಇರುವುದಾಗಿ ಹೇಳಿಕೊಂಡಿದ್ದನ್ನು ಅರಿತ ಮಾಧ್ಯಮ ಕ್ಷೇತ್ರದ ವ್ಯಕ್ತಿ ಕೂಡಲೇ ಉಪಾಯುಕ್ತ ಸಂತೋಷ್ ಕುಮಾರ್ ಅವರಿಗೆ ಫೋನಾಯಿಸಿದ್ದಾರೆ. ಅದಾಗಲೇ ಹಲವರಿಂದ ಫೋನ್ ಬಂದಿದ್ದರಿಂದ ಎಚ್ಚತ್ತುಕೊಂಡಿದ್ದ ಆಯುಕ್ತರು ತನ್ನ ಒರಿಜಿನಲ್ ಐಡಿಯಲ್ಲಿ ಮನವಿ ಕೂಡ ಮಾಡಿಕೊಂಡಿದ್ದರು. ಯಾರು ಕೂಡ ನನ್ನ ಹೆಸರಲ್ಲಿ ಹಣ ಕೇಳಿ, ಪೀಡಿಸಿದರೆ ಮೋಸ ಹೋಗಬೇಡಿ. ಈ ಬಗ್ಗೆ ಪೊಲೀಸ್ ದೂರು ಕೊಟ್ಟಿದ್ದಾಗಿ ಮಾಹಿತಿ ನೀಡಿದ್ದರು.
ಈ ಬಗ್ಗೆ ಆಯುಕ್ತರನ್ನು ಸಂಪರ್ಕಿಸಿದಾಗ, ಫೇಕ್ ಅಕೌಂಟ್ ಮೂಲಕ ಖದೀಮರು ಹಣ ಕೇಳಿರುವುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಈಗಾಗಲೇ ಸೈಬರ್ ಕ್ರೈಮ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಗೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
Fraudsters create fake facebook id of Revenue Assistant Commissioner Santosh Kumar, Mangalore and have looted money through online. A case has been registered to the cyber crime and also the issue has been brought to the notice of Commissioner of police said Santosh Kumar to Headline Karnataka.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm