ಬ್ರೇಕಿಂಗ್ ನ್ಯೂಸ್
17-11-20 11:09 pm Mangaluru Correspondent ಕರಾವಳಿ
ಮಂಗಳೂರು, ನವೆಂಬರ್ 17: ಪ್ರಸಿದ್ಧ ವ್ಯಕ್ತಿಗಳ ಹೆಸರಲ್ಲಿ ನಕಲಿ ಐಡಿ ಕ್ರಿಯೇಟ್ ಮಾಡಿ ಹಣ ಪೀಕಿಸುವ ಖದೀಮರು ಹೆಚ್ಚುತ್ತಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಉಪಾಯುಕ್ತರಾಗಿರುವ ಐಎಎಸ್ ಅಧಿಕಾರಿ ಡಾ.ಸಂತೋಷ್ ಕುಮಾರ್ ಹೆಸರಲ್ಲಿ ನಕಲಿ ಐಡಿ ಸೃಷ್ಟಿಸಿ ಹಲವರಿಂದ ಹಣ ಪೀಕಿಸ್ತಿರುವ ವಿಚಾರ ಬೆಳಕಿಗೆ ಬಂದಿದೆ.
ಸಂತೋಷ್ ಕುಮಾರ್ ಹೆಸರಿನಲ್ಲಿ ಅವರದೇ ಒರಿಜಿನಲ್ ಐಡಿಯಲ್ಲಿರುವ ಫೋಟೊ ಮತ್ತು ಹೆಸರು, ಹುದ್ದೆಯನ್ನು ಬಳಸಿಕೊಂಡು ಮತ್ತೊಂದು ಫೇಸ್ಬುಕ್ ಐಡಿ ಕ್ರಿಯೇಟ್ ಮಾಡಲಾಗಿದೆ. ಅಲ್ಲದೆ, ಅವರ ಸ್ನೇಹಿತರ ಲಿಸ್ಟ್ ಸಂಗ್ರಹಿಸಿ, ಹಣದ ಅಗತ್ಯ ಇರುವುದನ್ನು ಮನವರಿಕೆ ಮಾಡಿ ಹಣ ಕೇಳುತ್ತಿರುವುದು ಬಯಲಾಗಿದೆ.

ಸ್ನೇಹಿತನ ಮಗುವಿಗೆ ಹುಷಾರಿಲ್ಲ , ಸೀರಿಯಸ್ ಆಗಿದೆ. ಹತ್ತಿರದ ಸಂಬಂಧಿಕರು ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದಾರೆ. ತುರ್ತು ಹಣದ ಅಗತ್ಯ ಇದೆ. ಗೂಗಲ್ ಪೇ ಇದ್ದರೆ ಆದಷ್ಟು ಬೇಗ ಹಣ ರವಾನಿಸಿ. ಬೆಳಗ್ಗೆ ಹಿಂತಿರುಗಿಸುತ್ತೇನೆ... ಹೀಗೆಂದು ಸ್ನೇಹಿತರಿಗೆ ಮೆಸೆಂಜರ್ ಮೂಲಕ ಸಂದೇಶ ಕಳಿಸುವ ನಕಲಿ ವ್ಯಕ್ತಿ ಹಲವರ ಬಳಿಯಿಂದ ಹಣ ಲಪಟಾಯಿಸಿರುವ ಮಾಹಿತಿಯಿದೆ.

ಆಯುಕ್ತರಿಗೆ ಫೇಸ್ಬುಕ್ ಫ್ರೆಂಡ್ ಆಗಿರುವ ಮಾಧ್ಯಮದ ವ್ಯಕ್ತಿಯೊಬ್ಬರಿಗೆ ಇದೇ ರೀತಿಯ ಮೆಸೇಜ್ ಬಂದಿತ್ತು. ಹಣದ ಅಗತ್ಯ ಇರುವುದಾಗಿ ಹೇಳಿಕೊಂಡಿದ್ದನ್ನು ಅರಿತ ಮಾಧ್ಯಮ ಕ್ಷೇತ್ರದ ವ್ಯಕ್ತಿ ಕೂಡಲೇ ಉಪಾಯುಕ್ತ ಸಂತೋಷ್ ಕುಮಾರ್ ಅವರಿಗೆ ಫೋನಾಯಿಸಿದ್ದಾರೆ. ಅದಾಗಲೇ ಹಲವರಿಂದ ಫೋನ್ ಬಂದಿದ್ದರಿಂದ ಎಚ್ಚತ್ತುಕೊಂಡಿದ್ದ ಆಯುಕ್ತರು ತನ್ನ ಒರಿಜಿನಲ್ ಐಡಿಯಲ್ಲಿ ಮನವಿ ಕೂಡ ಮಾಡಿಕೊಂಡಿದ್ದರು. ಯಾರು ಕೂಡ ನನ್ನ ಹೆಸರಲ್ಲಿ ಹಣ ಕೇಳಿ, ಪೀಡಿಸಿದರೆ ಮೋಸ ಹೋಗಬೇಡಿ. ಈ ಬಗ್ಗೆ ಪೊಲೀಸ್ ದೂರು ಕೊಟ್ಟಿದ್ದಾಗಿ ಮಾಹಿತಿ ನೀಡಿದ್ದರು.
ಈ ಬಗ್ಗೆ ಆಯುಕ್ತರನ್ನು ಸಂಪರ್ಕಿಸಿದಾಗ, ಫೇಕ್ ಅಕೌಂಟ್ ಮೂಲಕ ಖದೀಮರು ಹಣ ಕೇಳಿರುವುದನ್ನು ದೃಢಪಡಿಸಿದ್ದಾರೆ. ಈ ಬಗ್ಗೆ ಈಗಾಗಲೇ ಸೈಬರ್ ಕ್ರೈಮ್ ಮತ್ತು ಮಂಗಳೂರು ಪೊಲೀಸ್ ಕಮಿಷನರ್ ಗೆ ತಿಳಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
Fraudsters create fake facebook id of Revenue Assistant Commissioner Santosh Kumar, Mangalore and have looted money through online. A case has been registered to the cyber crime and also the issue has been brought to the notice of Commissioner of police said Santosh Kumar to Headline Karnataka.
18-03-26 11:00 pm
Supritha Jain
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
ಯುಗಾದಿ ಹಬ್ಬಕ್ಕೆ ಬಸ್ ದರ ಏರಿಕೆ ; ಜೀವಂತ ವ್ಯಕ್ತಿಯ...
18-03-26 03:41 pm
18-03-26 07:11 pm
HK News Staffer
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
19-03-26 02:51 pm
HK News Staffer
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
ಬೋಳೂರಿನಲ್ಲಿ ದೈವನರ್ತನ ಮಾಡಿದ್ದು ಕ್ರಿಸ್ತಿಯನ್ ಅಲ್...
18-03-26 03:38 pm
SCS Hospital, Case: ಹೆರಿಗೆ ವೇಳೆ ನವಜಾತ ಶಿಶು ಸಾ...
18-03-26 09:41 am
19-03-26 12:16 pm
HK News Staffer
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm