ಬ್ರೇಕಿಂಗ್ ನ್ಯೂಸ್
14-12-23 10:13 pm Mangalore Correspondent ಕರಾವಳಿ
ಮಂಗಳೂರು, ಡಿ.14: ಚುನಾವಣೆಗೆ ಮೊದಲೇ ಬಿಲ್ಲವ ಸಮುದಾಯದಿಂದ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಬೇಡಿಕೆ ಇಡಲಾಗಿತ್ತು. ಬಿಜೆಪಿ ಸರಕಾರ ಕೊನೆಯ ಕ್ಷಣದಲ್ಲಿ ನಿಗಮ ರಚನೆ ಮಾಡಿ ಘೋಷಣೆ ಮಾಡಿತ್ತು. ಆದರೆ, ಯಾವುದೇ ಅನುದಾನವನ್ನೂ ನೀಡದೆ, ಪ್ರಕ್ರಿಯೆಯನ್ನೂ ಮಾಡಿರಲಿಲ್ಲ. ಈಗ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಬಿಲ್ಲವ ಮುಖಂಡರು ಬೇಡಿಕೆ ಇರಿಸಿದ್ದು 500 ಕೋಟಿ ರು. ಅನುದಾನವನ್ನು ಇದೇ ಡಿಸೆಂಬರ್ ಒಳಗೆ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಈ ಹಿಂದೆ ನಿಗಮ ರಚನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆವು. ಅಧಿವೇಶನದ ಸಮಯದಲ್ಲಿ ನಿಗಮ ರಚನೆ ಮಾಡಲು ತೊಡಕಾಗುತ್ತದೆ. ಅದರ ಬಳಿಕ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಚಳಿಗಾಲದ ಅಧಿವೇಶನ ಮುಗಿದು 15 ದಿನಗಳ ಒಳಗೆ ನಾರಾಯಣ ಗುರು ನಿಗಮ ರಚನೆ ಮಾಡಬೇಕು. ಇಲ್ಲದಿದ್ದರೆ ಜ.1 ರ ನಂತರ ಸಮಾಜದ ಎಲ್ಲ ಸ್ವಾಮೀಜಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು, ಕ್ಷೇತ್ರದ ಪ್ರಮುಖರನ್ನು ಒಗ್ಗೂಡಿಸಿ ಬೀದಿಗಿಳಿದು ಜನಾಂದೋಲನ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಾರಾಯಣ ಗುರು ಜಯಂತಿ ವೇಳೆ ಅನುದಾನ ಘೋಷಿಸಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದೂ ಹುಸಿಯಾಗಿದೆ. ಇತ್ತೀಚೆಗೆ ನಡೆದ ಸಮುದಾಯದ ಸಭೆಯಲ್ಲಿ ಸಮಾಜದ ಎಲ್ಲಾ ನಾಯಕರು ಈ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಅಧಿವೇಶನದಲ್ಲಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಅವಕಾಶವಿಲ್ಲವೆಂದು ಸರಕಾರ ನುಣುಚಿಕೊಂಡಿದೆ. ಅಧಿವೇಶನದ ಬಳಿಕ ಸಮಾಜದ ಪ್ರಮುಖರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಸರಕಾರ ಹೇಳಿದೆ.
ಆದ್ದರಿಂದ ಅಧಿವೇಶನ ಮುಗಿದ ಕೂಡಲೇ ಡಿಸೆಂಬರ್ 31ರೊಳಗೆ ನಿಗಮದ ಹೆಸರಲ್ಲಿ 500 ಕೋಟಿ ರೂ. ಅನುದಾನ ನೀಡಬೇಕು. ಇಲ್ಲದಿದ್ದಲ್ಲಿ ಜ.1ರ ಬಳಿಕ ಹೋರಾಟ ಅನಿವಾರ್ಯ. ಅಲ್ಲದೆ ಕಾಂತರಾಜು ಆಯೋಗ ವರದಿ ಜಾರಿಗೊಳಿಸಬೇಕು. ಪ್ರವರ್ಗ – ಎ ಯಲ್ಲಿ ಈಗಿರುವ 102 ಜಾತಿ ಸಮುದಾಯಗಳಿಗಿರುವ 15 ಪ್ರತಿಶತ ಮೀಸಲಾತಿಯಲ್ಲಿ ಯಾವುದೇ ವ್ಯತ್ಯಾಸ ಆಗಬಾರದು ಎಂದು ಸತ್ಯಜಿತ್ ಸುರತ್ಕಲ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ, ಶಶಿಧರ್ ಅಮೀನ್, ನವೀನ್ ಪೂಜಾರಿ ಮತ್ತಿತರರಿದ್ದರು.
Mangalore Announce 500 crores for Narayana Guru development cell warns Satyajit Surathkal.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 07:04 pm
HK News Desk
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
ಎಐಎಡಿಎಂಕೆ ತಾಳಕ್ಕೆ ಕುಣಿಯುತ್ತಿರುವ ಬಿಜೆಪಿ ; ಫೈರ್...
04-02-26 03:42 pm
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
06-02-26 03:09 pm
Mangalore Correspondent
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
ನಂತೂರಿನಿಂದ ಬೈಕಂಪಾಡಿಗೆ ಫ್ಲೈ ಓವರ್ ಪ್ರಸ್ತಾಪ ; ಮಾ...
05-02-26 11:03 pm
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm