ಬ್ರೇಕಿಂಗ್ ನ್ಯೂಸ್
14-12-23 10:13 pm Mangalore Correspondent ಕರಾವಳಿ
ಮಂಗಳೂರು, ಡಿ.14: ಚುನಾವಣೆಗೆ ಮೊದಲೇ ಬಿಲ್ಲವ ಸಮುದಾಯದಿಂದ ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಬೇಡಿಕೆ ಇಡಲಾಗಿತ್ತು. ಬಿಜೆಪಿ ಸರಕಾರ ಕೊನೆಯ ಕ್ಷಣದಲ್ಲಿ ನಿಗಮ ರಚನೆ ಮಾಡಿ ಘೋಷಣೆ ಮಾಡಿತ್ತು. ಆದರೆ, ಯಾವುದೇ ಅನುದಾನವನ್ನೂ ನೀಡದೆ, ಪ್ರಕ್ರಿಯೆಯನ್ನೂ ಮಾಡಿರಲಿಲ್ಲ. ಈಗ ಮತ್ತೆ ಕಾಂಗ್ರೆಸ್ ಸರ್ಕಾರಕ್ಕೆ ಬಿಲ್ಲವ ಮುಖಂಡರು ಬೇಡಿಕೆ ಇರಿಸಿದ್ದು 500 ಕೋಟಿ ರು. ಅನುದಾನವನ್ನು ಇದೇ ಡಿಸೆಂಬರ್ ಒಳಗೆ ನೀಡಬೇಕೆಂದು ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸತ್ಯಜಿತ್ ಸುರತ್ಕಲ್, ಈ ಹಿಂದೆ ನಿಗಮ ರಚನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆವು. ಅಧಿವೇಶನದ ಸಮಯದಲ್ಲಿ ನಿಗಮ ರಚನೆ ಮಾಡಲು ತೊಡಕಾಗುತ್ತದೆ. ಅದರ ಬಳಿಕ ಮಾಡುವುದಾಗಿ ಭರವಸೆ ನೀಡಿದ್ದರು. ಈಗ ಚಳಿಗಾಲದ ಅಧಿವೇಶನ ಮುಗಿದು 15 ದಿನಗಳ ಒಳಗೆ ನಾರಾಯಣ ಗುರು ನಿಗಮ ರಚನೆ ಮಾಡಬೇಕು. ಇಲ್ಲದಿದ್ದರೆ ಜ.1 ರ ನಂತರ ಸಮಾಜದ ಎಲ್ಲ ಸ್ವಾಮೀಜಿಗಳು, ಸಂಘ ಸಂಸ್ಥೆಗಳು, ಸಂಘಟನೆಗಳು, ಕ್ಷೇತ್ರದ ಪ್ರಮುಖರನ್ನು ಒಗ್ಗೂಡಿಸಿ ಬೀದಿಗಿಳಿದು ಜನಾಂದೋಲನ ರೂಪಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ನಾರಾಯಣ ಗುರು ಜಯಂತಿ ವೇಳೆ ಅನುದಾನ ಘೋಷಿಸಬಹುದೆಂಬ ನಿರೀಕ್ಷೆಯಿತ್ತು. ಆದರೆ ಅದೂ ಹುಸಿಯಾಗಿದೆ. ಇತ್ತೀಚೆಗೆ ನಡೆದ ಸಮುದಾಯದ ಸಭೆಯಲ್ಲಿ ಸಮಾಜದ ಎಲ್ಲಾ ನಾಯಕರು ಈ ಬಗ್ಗೆ ಬೇಡಿಕೆ ಇಟ್ಟಿದ್ದರು. ಆದರೆ ಅಧಿವೇಶನದಲ್ಲಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಅವಕಾಶವಿಲ್ಲವೆಂದು ಸರಕಾರ ನುಣುಚಿಕೊಂಡಿದೆ. ಅಧಿವೇಶನದ ಬಳಿಕ ಸಮಾಜದ ಪ್ರಮುಖರ ಸಭೆ ಕರೆದು ಕ್ರಮ ಕೈಗೊಳ್ಳುವುದಾಗಿ ಸರಕಾರ ಹೇಳಿದೆ.
ಆದ್ದರಿಂದ ಅಧಿವೇಶನ ಮುಗಿದ ಕೂಡಲೇ ಡಿಸೆಂಬರ್ 31ರೊಳಗೆ ನಿಗಮದ ಹೆಸರಲ್ಲಿ 500 ಕೋಟಿ ರೂ. ಅನುದಾನ ನೀಡಬೇಕು. ಇಲ್ಲದಿದ್ದಲ್ಲಿ ಜ.1ರ ಬಳಿಕ ಹೋರಾಟ ಅನಿವಾರ್ಯ. ಅಲ್ಲದೆ ಕಾಂತರಾಜು ಆಯೋಗ ವರದಿ ಜಾರಿಗೊಳಿಸಬೇಕು. ಪ್ರವರ್ಗ – ಎ ಯಲ್ಲಿ ಈಗಿರುವ 102 ಜಾತಿ ಸಮುದಾಯಗಳಿಗಿರುವ 15 ಪ್ರತಿಶತ ಮೀಸಲಾತಿಯಲ್ಲಿ ಯಾವುದೇ ವ್ಯತ್ಯಾಸ ಆಗಬಾರದು ಎಂದು ಸತ್ಯಜಿತ್ ಸುರತ್ಕಲ್ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಪ್ರಮುಖರಾದ ರಾಕೇಶ್ ಪೂಜಾರಿ, ಶಶಿಧರ್ ಅಮೀನ್, ನವೀನ್ ಪೂಜಾರಿ ಮತ್ತಿತರರಿದ್ದರು.
Mangalore Announce 500 crores for Narayana Guru development cell warns Satyajit Surathkal.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm