ಬ್ರೇಕಿಂಗ್ ನ್ಯೂಸ್
16-12-23 03:44 pm Mangalore Correspondent ಕರಾವಳಿ
ಪುತ್ತೂರು, ಡಿ.16: ಪುತ್ತೂರಿನಲ್ಲಿ ಮತ್ತೋರ್ವ ಹಿಂದು ಸಂಘಟನೆ ಕಾರ್ಯಕರ್ತನನ್ನು ಬೀದರ್ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸರು ಮುಂದಾಗಿದ್ದಾರೆ. ಡಿವೈಎಸ್ಪಿ ವರದಿ ಹಿನ್ನೆಲೆ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ.
ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೇಶ್ ಕುಮಾರ್ ನಾಯರ್ ಎಂಬವರಿಗೆ ನೋಟಿಸ್ ನೀಡಲಾಗಿದ್ದು ನಿಮ್ಮನ್ನ ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ಪುತ್ತೂರು ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ.
ಸದ್ಯ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತ. ಹಲ್ಲೆ, ನೈತಿಕ ಪೊಲೀಸ್ ಗಿರಿ ಮಾದರಿಯ ನಾಲ್ಕು ಪ್ರಕರಣಗಳಲ್ಲಿ ಪ್ರವೇಶ್ ಆರೋಪಿಯಾಗಿದ್ದು ಈತ ಪುತ್ತೂರಿನಲ್ಲೇ ಇದ್ದರೆ ಕೋಮು ವೈಷಮ್ಯ, ಗಲಭೆ ಆಗುವುದಕ್ಕೆ ಆಸ್ಪದ ನೀಡಿದಂತಾಗುತ್ತದೆ. ಆದ್ದರಿಂದ ಕೋರ್ಟ್ ಹಾಜರಾತಿ ಹೊರತುಪಡಿಸಿ ದ.ಕ. ಜಿಲ್ಲೆಯಲ್ಲಿ ಇರದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಗಡೀಪಾರು ಮಾಡಬೇಕು ಎಂದು ಪುತ್ತೂರು ಡಿವೈಎಸ್ಪಿ ವರದಿ ನೀಡಿದ್ದಾರೆ.
ಪೊಲೀಸರ ವರದಿ ಹಿನ್ನೆಲೆಯಲ್ಲಿ ಡಿಸೆಂಬರ್ 20 ರಂದು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗುವಂತೆ ಪ್ರವೇಶ್ ಕುಮಾರ್ ಗೆ ಸಹಾಯಕ ಆಯುಕ್ತರು ನೋಟಿಸ್ ನೀಡಿದ್ದಾರೆ. ಪೊಲೀಸರ ಈ ನಡೆಗೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ. ಇತ್ತೀಚೆಗೆ ಇದೇ ಮಾದರಿಯಲ್ಲಿ ನಾಲ್ವರು ಸಂಘಟನೆ ಕಾರ್ಯಕರ್ತರನ್ನು ಗಡೀಪಾರು ಮಾಡಲು ನೋಟಿಸ್ ಮಾಡಲಾಗಿತ್ತು. ಗಡೀಪಾರು ಆದೇಶ ಆಗುವ ಮೊದಲೇ ನ್ಯಾಯಾಲಯದಿಂದ ತಡೆ ವಿಧಿಸಲಾಗಿತ್ತು.
The police are planning to deport another Hindu outfit activist Pravish Kumar from Puttur to Bidar district. Puttur Assistant Commissioner has issued a notice based on the DySP's report.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm