ಬ್ರೇಕಿಂಗ್ ನ್ಯೂಸ್
16-12-23 09:39 pm Mangalore Correspondent ಕರಾವಳಿ
ಮಂಗಳೂರು, ಡಿ.16: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರತ್ಯೇಕ ತುಳು ವಿಭಾಗ ಆರಂಭಿಸಬೇಕೆಂದು ಒತ್ತಾಯಿಸಿ ಎನ್ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ನೀಡಿದ್ದಾರೆ.
ತುಳು ಭಾಷೆಯನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸಿ 2018-19ರ ಸಾಲಿನಲ್ಲಿ ಮಂಗಳೂರು ವಿವಿಯ ಹಂಪನಕಟ್ಟೆ ಸಂಧ್ಯಾ ಕಾಲೇಜಿನಲ್ಲಿ ಎಂಎ ತರಗತಿ ಆರಂಭಿಸಲಾಗಿತ್ತು. ಆದರೆ, ಎಂಎ ತರಗತಿ ಆರಂಭಗೊಂಡು ಐದು ವರ್ಷ ಕಳೆದರೂ ಕನ್ನಡ ಅಧ್ಯಯನ ವಿಭಾಗದಡಿ ನಡೆಸಲ್ಪಡುತ್ತಿದೆ. ಇದರಿಂದ ತುಳು ಭಾಷೆಯ ಬಗ್ಗೆ ಉನ್ನತ ಅಧ್ಯಯನ ಕೈಗೊಳ್ಳಲು ತೊಂದರೆಯಾಗಿದ್ದು, ಸ್ವತಂತ್ರ ವಿಭಾಗದ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಮಂಗಳೂರು ವಿವಿಯ ಸಿಂಡಿಕೇಟ್ ನಲ್ಲಿ ನಿರ್ಣಯ ಆಗಿದ್ದು, ವಿವಿಯ ಕಡೆಯಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಬರೆಯಲಾಗಿದೆ. ವಿವಿಯ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಅನುಮತಿಸಿ, ಪ್ರತ್ಯೇಕ ಅಧ್ಯಯನ ವಿಭಾಗ ರಚಿಸಲು ಮುತುವರ್ಜಿ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ತುಳು ಅಧ್ಯಯನ ವಿಭಾಗ ಆರಂಭಗೊಂಡಲ್ಲಿ ಪಿಎಚ್ ಡಿ ಅಧ್ಯಯನಕ್ಕೆ ಅವಕಾಶ ಸಿಗುತ್ತದೆ. ಅಲ್ಲದೆ, ತುಳು ಸಂಸ್ಕೃತಿ, ಭಾಷೆ, ಜನಪದ ಬಗ್ಗೆ ಅಧ್ಯಯನ ಕೈಗೊಳ್ಳಲು ಶೈಕ್ಷಣಿಕವಾಗಿ ಸ್ವತಂತ್ರ ಅಸ್ತಿತ್ವ ಸಿಗುತ್ತದೆ. ಪ್ರಸ್ತುತ ಕಳೆದ ಐದು ವರ್ಷಗಳಲ್ಲಿ ತುಳು ಭಾಷೆಯಲ್ಲಿ ಹಲವಾರು ಮಂದಿ ಎಂಎ ಪೂರೈಸಿದರೂ, ಆಸಕ್ತರಿಗೆ ಉನ್ನತ ಮಟ್ಟದ ಸಂಶೋಧನೆ ಕೈಗೊಳ್ಳಲು ಅವಕಾಶ ಇಲ್ಲ. ಸ್ವತಂತ್ರ ಅಸ್ತಿತ್ವ ಇಲ್ಲದ ಕಾರಣ, ಕನ್ನಡ ಅಧ್ಯಯನ ಕೇಂದ್ರದ ಅಡಿಯಲ್ಲಿ ತುಳು ವಿಭಾಗ ಇರುವುದರಿಂದ ಉನ್ನತ ಅಧ್ಯಯನಕ್ಕೆ ಅಡ್ಡಿಯಾಗಿದೆ. ಇದಲ್ಲದೆ, ಸದ್ಯಕ್ಕೆ ಕನ್ನಡ ವಿಭಾಗದವರೇ ತುಳು ಪಠ್ಯ ರಚನೆ, ಪ್ರಶ್ನೆಪತ್ರಿಕೆ ರಚನೆ, ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವ ಬಗ್ಗೆ ಗಮನಕ್ಕೆ ತಂದಿದ್ದಾರೆ.
ಇದಲ್ಲದೆ, 2019ರಲ್ಲೇ ಮಂಗಳೂರು ವಿವಿಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ತುಳುವನ್ನು ಭಾಷಾ ಪತ್ರಿಕೆಯಾಗಿ ಅಧ್ಯಯನಕ್ಕೆ ಅವಕಾಶ ನೀಡಿದ್ದರೂ, ಮೂಡುಬಿದ್ರೆಯ ಆಳ್ವಾಸ್ ಮತ್ತು ರಥಬೀದಿಯ ಸರಕಾರಿ ಕಾಲೇಜು ಹೊರತುಪಡಿಸಿ ಉಳಿದ ಕಡೆ ಆರಂಭಗೊಂಡಿಲ್ಲ. ಈ ಬಗ್ಗೆ ಮುತುವರ್ಜಿ ವಹಿಸಬೇಕಾಗಿದ್ದು, ಇದಕ್ಕೆಲ್ಲ ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆಗಬೇಕಾಗಿದೆ ಎಂದು ಸುಹಾನ್ ಆಳ್ವ ಮನವಿಯಲ್ಲಿ ಒತ್ತಾಯ ಮಾಡಿದ್ದಾರೆ.
NSUI Suhan Alva demands for spearate Tulu Departmemt at Mangalore university to Education Minister Sudhakar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm