ಬ್ರೇಕಿಂಗ್ ನ್ಯೂಸ್
16-12-23 09:39 pm Mangalore Correspondent ಕರಾವಳಿ
ಮಂಗಳೂರು, ಡಿ.16: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರತ್ಯೇಕ ತುಳು ವಿಭಾಗ ಆರಂಭಿಸಬೇಕೆಂದು ಒತ್ತಾಯಿಸಿ ಎನ್ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುಹಾನ್ ಆಳ್ವ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರಿಗೆ ಮನವಿ ನೀಡಿದ್ದಾರೆ.
ತುಳು ಭಾಷೆಯನ್ನು ಉನ್ನತ ಶಿಕ್ಷಣದಲ್ಲಿ ಅಳವಡಿಸಿ 2018-19ರ ಸಾಲಿನಲ್ಲಿ ಮಂಗಳೂರು ವಿವಿಯ ಹಂಪನಕಟ್ಟೆ ಸಂಧ್ಯಾ ಕಾಲೇಜಿನಲ್ಲಿ ಎಂಎ ತರಗತಿ ಆರಂಭಿಸಲಾಗಿತ್ತು. ಆದರೆ, ಎಂಎ ತರಗತಿ ಆರಂಭಗೊಂಡು ಐದು ವರ್ಷ ಕಳೆದರೂ ಕನ್ನಡ ಅಧ್ಯಯನ ವಿಭಾಗದಡಿ ನಡೆಸಲ್ಪಡುತ್ತಿದೆ. ಇದರಿಂದ ತುಳು ಭಾಷೆಯ ಬಗ್ಗೆ ಉನ್ನತ ಅಧ್ಯಯನ ಕೈಗೊಳ್ಳಲು ತೊಂದರೆಯಾಗಿದ್ದು, ಸ್ವತಂತ್ರ ವಿಭಾಗದ ಅಗತ್ಯವಿದೆ. ಈ ಬಗ್ಗೆ ಈಗಾಗಲೇ ಮಂಗಳೂರು ವಿವಿಯ ಸಿಂಡಿಕೇಟ್ ನಲ್ಲಿ ನಿರ್ಣಯ ಆಗಿದ್ದು, ವಿವಿಯ ಕಡೆಯಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಬರೆಯಲಾಗಿದೆ. ವಿವಿಯ ಪ್ರಸ್ತಾವನೆಯನ್ನು ಶೀಘ್ರದಲ್ಲೇ ಅನುಮತಿಸಿ, ಪ್ರತ್ಯೇಕ ಅಧ್ಯಯನ ವಿಭಾಗ ರಚಿಸಲು ಮುತುವರ್ಜಿ ವಹಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ತುಳು ಅಧ್ಯಯನ ವಿಭಾಗ ಆರಂಭಗೊಂಡಲ್ಲಿ ಪಿಎಚ್ ಡಿ ಅಧ್ಯಯನಕ್ಕೆ ಅವಕಾಶ ಸಿಗುತ್ತದೆ. ಅಲ್ಲದೆ, ತುಳು ಸಂಸ್ಕೃತಿ, ಭಾಷೆ, ಜನಪದ ಬಗ್ಗೆ ಅಧ್ಯಯನ ಕೈಗೊಳ್ಳಲು ಶೈಕ್ಷಣಿಕವಾಗಿ ಸ್ವತಂತ್ರ ಅಸ್ತಿತ್ವ ಸಿಗುತ್ತದೆ. ಪ್ರಸ್ತುತ ಕಳೆದ ಐದು ವರ್ಷಗಳಲ್ಲಿ ತುಳು ಭಾಷೆಯಲ್ಲಿ ಹಲವಾರು ಮಂದಿ ಎಂಎ ಪೂರೈಸಿದರೂ, ಆಸಕ್ತರಿಗೆ ಉನ್ನತ ಮಟ್ಟದ ಸಂಶೋಧನೆ ಕೈಗೊಳ್ಳಲು ಅವಕಾಶ ಇಲ್ಲ. ಸ್ವತಂತ್ರ ಅಸ್ತಿತ್ವ ಇಲ್ಲದ ಕಾರಣ, ಕನ್ನಡ ಅಧ್ಯಯನ ಕೇಂದ್ರದ ಅಡಿಯಲ್ಲಿ ತುಳು ವಿಭಾಗ ಇರುವುದರಿಂದ ಉನ್ನತ ಅಧ್ಯಯನಕ್ಕೆ ಅಡ್ಡಿಯಾಗಿದೆ. ಇದಲ್ಲದೆ, ಸದ್ಯಕ್ಕೆ ಕನ್ನಡ ವಿಭಾಗದವರೇ ತುಳು ಪಠ್ಯ ರಚನೆ, ಪ್ರಶ್ನೆಪತ್ರಿಕೆ ರಚನೆ, ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿರುವ ಬಗ್ಗೆ ಗಮನಕ್ಕೆ ತಂದಿದ್ದಾರೆ.
ಇದಲ್ಲದೆ, 2019ರಲ್ಲೇ ಮಂಗಳೂರು ವಿವಿಯ ವ್ಯಾಪ್ತಿಯ ಪದವಿ ಕಾಲೇಜುಗಳಲ್ಲಿ ತುಳುವನ್ನು ಭಾಷಾ ಪತ್ರಿಕೆಯಾಗಿ ಅಧ್ಯಯನಕ್ಕೆ ಅವಕಾಶ ನೀಡಿದ್ದರೂ, ಮೂಡುಬಿದ್ರೆಯ ಆಳ್ವಾಸ್ ಮತ್ತು ರಥಬೀದಿಯ ಸರಕಾರಿ ಕಾಲೇಜು ಹೊರತುಪಡಿಸಿ ಉಳಿದ ಕಡೆ ಆರಂಭಗೊಂಡಿಲ್ಲ. ಈ ಬಗ್ಗೆ ಮುತುವರ್ಜಿ ವಹಿಸಬೇಕಾಗಿದ್ದು, ಇದಕ್ಕೆಲ್ಲ ಮಂಗಳೂರು ವಿವಿಯಲ್ಲಿ ಸ್ವತಂತ್ರ ತುಳು ಅಧ್ಯಯನ ಕೇಂದ್ರ ಆಗಬೇಕಾಗಿದೆ ಎಂದು ಸುಹಾನ್ ಆಳ್ವ ಮನವಿಯಲ್ಲಿ ಒತ್ತಾಯ ಮಾಡಿದ್ದಾರೆ.
NSUI Suhan Alva demands for spearate Tulu Departmemt at Mangalore university to Education Minister Sudhakar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm