ಬ್ರೇಕಿಂಗ್ ನ್ಯೂಸ್
17-12-23 03:19 pm Mangalore Correspondent ಕರಾವಳಿ
ಉಳ್ಳಾಲ, ಡಿ.17: ಮಾಲಿಗಪ್ಪುರಂ ಮಳಯಾಲಂ ಹಿಟ್ ಚಿತ್ರದ ಬಾಲನಟಿ ಬೇಬಿ ದೇವಾನಂದ್ ಅವರು ಕಲ್ಲಾಪು ಬುರ್ದುಗೋಳಿಯ ಗುಳಿಗ-ಕೊರಗಜ್ಜ ಉದ್ಭವ ಶಿಲೆಯ ಆದಿ ಕ್ಷೇತ್ರಕ್ಕೆ ಭೇಟಿ ನೀಡಿ ತನ್ನ ನಟನೆಯ ಹೊಸ ಚಿತ್ರ "ಗುಳಿಗನ್" ಯಶಸ್ಸಿಗೆ ಪ್ರಾರ್ಥಿಸಿದರು.
ಸೋಮೇಶ್ವರದಲ್ಲಿ ನಡೆದ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶಕ್ಕೆ ವಿಶೇಷ ಅತಿಥಿಯಾಗಿ ಆಗಮಿಸಿದ್ದ ಬೇಬಿ ದೇವಾನಂದ ಅವರು ತಂದೆ ಜಿಬಿನ್ ಜೊತೆ ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ ನೀಡಿದರು. ತನ್ನ ಹನ್ನೊಂದನೇ ವಯಸ್ಸಿನಲ್ಲಿ ದೇಶ, ವಿದೇಶಗಳಲ್ಲಿ ನಡೆದ ಚಿತ್ರೀಕರಣಗಳಲ್ಲಿ ನಟಿಸಿರುವ ಕೀರ್ತಿ ಬೇಬಿ ದೇವನಂದರದ್ದು.


ಸುಮಾರು 14 ಚಿತ್ರಗಳಲ್ಲಿ ಅಭಿನಯಿಸಿರುವ ಬೇಬಿ ದೇವಾನಂದ್ ಕಳೆದ ವರುಷ ತೆರೆ ಕಂಡ"ಮಾಲಿಗಪ್ಪುರಂ" ಎಂಬ ಅಯ್ಯಪ್ಪ ಭಕ್ತಿ ಪ್ರಧಾನ ಚಿತ್ರದಲ್ಲಿ ಅದ್ಭುತವಾಗಿ ನಟಿಸಿದ್ದು ಚಿತ್ರವು ಸೂಪರ್ ಹಿಟ್ ಆಗಿತ್ತು. ದೇವಾನಂದ್ ಸಾಲು, ಸಾಲು ಚಿತ್ರಗಳಲ್ಲಿ ಅಭಿನಯಿಸಲು ಆಫರ್ ಬಂದಿದ್ದು ಆಕೆಯ ನಟನೆಯ ಮುಂದಿನ ಚಿತ್ರ "ಗುಳಿಗನ್" ಯಶಸ್ಸಿಗಾಗಿ ಕರಾವಳಿಯ ಕಾರಣೀಕ ಶಕ್ತಿಗಳಾದ ಕೊರಗಜ್ಜ- ಗುಳಿಗ ದೈವಗಳಲ್ಲಿ ಬಾಲನಟಿ ಪ್ರಾರ್ಥನೆ ಸಲ್ಲಿಸಿದಳು. ಕೊಂಡೆವೂರು ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿಗಳು ಬಾಲನಟಿಯನ್ನು ಸನ್ಮಾನಿಸಿ ಗೌರವಿಸಿದರು.ಬುರ್ದುಗೋಳಿ ಕ್ಷೇತ್ರದ ಕುರಿತಾಗಿ ಪೂಜಾ ಸನಿಲ್ ಕಂಠದಾನದಲ್ಲಿ ರಚನೆಯಾದ ನೂತನ ಭಕ್ತಿಗೀತೆಯ ಧ್ವನಿ ಸುರುಳಿಯನ್ನ ಈ ವೇಳೆ ಬಿಡುಗಡೆ ಮಾಡಲಾಯಿತು. ಹಾಲುಗೆನ್ನೆಯ ಮುದ್ದಾದ ಮಲಯಾಳಿ ಬಾಲ ನಟಿಯ ಜತೆಗೆ ಸ್ಥಳೀಯರು ಸೆಲ್ಫಿ ಕ್ಲಿಕ್ಕಿಸಿ ಸಂಭ್ರಮಿಸಿದರು.


ಬುರ್ದುಗೋಳಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ , ಗೌರವ ಸಲಹೆಗಾರರಾದ ಚಂದ್ರಹಾಸ್ ಪಂಡಿತ್ ಹೌಸ್, ಗೌರವ ಅಧ್ಯಕ್ಷರಾದ ಸಂಜೀವ ಭಂಡಾರಿ, ಪ್ರಮುಖರಾದ ದೇವದಾಸ್ ಕಾಯಂಗಲ, ನವೀನ್ ಕಾಯಂಗಳ, ಪ್ರಶಾಂತ್ ಕಾಯಂಗಳ, ಪುರುಷೋತ್ತಮ ಕಲ್ಲಾಪು ಮೊದಲಾದವರು ಉಪಸ್ಥಿತರಿದ್ದರು.
Malikappuram Malayalam movie child actress Kallu Deva Nandha visits Kallapu Burdugoli Koragajja Temple at Ullal in Mangalore
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm