ಬ್ರೇಕಿಂಗ್ ನ್ಯೂಸ್
17-12-23 09:22 pm Udupi Correspondent ಕರಾವಳಿ
ಉಳ್ಳಾಲ, ಡಿ.17: ಚಪ್ಪಲಿ ಹಾಕದೆ ನಡೆಯಲು ಅಸಾಧ್ಯ. ಗುಟ್ಕಾ, ತಂಬಾಕು ಬಿಡಲು ಒಲ್ಲೆ ಎಂಬವರು ಮಾಲಾಧಾರಣೆ ಮಾಡಬೇಡಿ. ಮಾಲಾಧಾರಿ ವ್ಯಕ್ತಿ ಮಡದಿಯೊಂದಿಗೆ ಜೊತೆಯಲ್ಲಿ ವಾಹನ ಸವಾರಿ ಮಾಡೋದಂತೂ ಸಹಿಸಲಸಾಧ್ಯ ಎಂದು ಕೊಂಡೆವೂರಿನ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.
ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ(ಸಾಸ್) ಉಳ್ಳಾಲ ತಾಲೂಕು ವತಿಯಿಂದ ಸೋಮೇಶ್ವರದ ಸೋಮನಾಥ ದೇವಸ್ಥಾನದಲ್ಲಿ ಭಾನುವಾರ ನಡೆದ "ಅಯ್ಯಪ್ಪ ಭಕ್ತರ ಮಹಾಸಂಗಮ" ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿದರು. ಹಿಂದಿನ ಕಾಲದಲ್ಲಿ ಅಯ್ಯಪ್ಪ ವೃತಾಚರಣೆಯ ಮುದ್ರಾಧಾರಣೆಯ ಒಂದು ವಾರದ ಮೊದಲೇ ಮನೆಮಂದಿಯೆಲ್ಲರೂ ದುಃಖದಿಂದ ಮೌನಿಗಳಾಗುತ್ತಿದ್ದರು. ಯಾಕೆಂದರೆ ಮನೆ ಮಗ ಶಬರಿಮಲೆ ಯಾತ್ರೆ ಮುಗಿಸಿ ಮತ್ತೆ ವಾಪಾಸು ಬರುವ ನಿರೀಕ್ಷೆ ಯಾರಿಗೂ ಇರಲಿಲ್ಲ. ಅಂಥ ದುರ್ಗಮ ಹಾದಿ ಮತ್ತು ಕಠಿಣ ವ್ರತ ನಿಯಮಕ್ಕೆ ಬದ್ಧನಾಗಿರಬೇಕಿತ್ತು. ಆದರೆ ಇಂದು ನಾಲ್ಕೈದು ದಿವಸ ಮಾಲಾಧಾರಣೆ ಮಾಡಿ ಶಬರಿಮಲೆ ಯಾತ್ರೆ ಕೈಗೊಳ್ಳುವವರನ್ನ ಕಾಣುವಾಗ ಬೇಸರವಾಗುತ್ತೆ. ಮಹತ್ವದ ವೈರಾಗ್ಯ ವೃತಾಚರಣೆ ಇಂದು ಎಂತಹ ಸ್ಥಿತಿಗೆ ತಲುಪಿದೆ ಎಂದರೆ ಮಾಲಾಧಾರಿಗಳು ಪತ್ನಿಯನ್ನೇ ವಾಹನಗಳಲ್ಲಿ ಕುಳ್ಳಿರಿಸಿ ಹೋಗೋದಂತೂ ಸಹಿಸಲಸಾಧ್ಯ ಎನಿಸಿದೆ. ನಮ್ಮ ಆಚಾರ, ವಿಚಾರ, ಸಂಸ್ಕೃತಿಗಳನ್ನ ನಾವೇ ಅಳಿಸಿದರೆ ಅನ್ಯರನ್ನು ದೂರಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ ಮಾತನಾಡಿ, ಅಯ್ಯಪ್ಪ ಭಕ್ತರು ಪ್ರತಿ ಬಾರಿ ಶಬರಿಮಲೆ ಯಾತ್ರೆಗೈದ ಸಂದರ್ಭದಲ್ಲಿ ಆತನ ಜೀವನ ಪರಿವರ್ತನೆಯಾಗಬೇಕು. ಬೆಳಗ್ಗೆ ಮಾಲಾಧಾರಣೆ ನಡೆಸಿ ಸಂಜೆ ಶಬರಿಮಲೆ ಯಾತ್ರೆ ಕೈಗೊಳ್ಳುವ ಕೆಟ್ಟ ಸಂಸ್ಕೃತಿಯನ್ನ ಗುರುಸ್ವಾಮಿಗಳು ನಿಲ್ಲಿಸಬೇಕೆಂದು ಕರೆ ನೀಡಿದರು.
ಸಮಾವೇಶದಲ್ಲಿ "ಮಾಲಿಗಪ್ಪುರಂ" ಮಲಯಾಳಂ ಹಿಟ್ ಚಲನಚಿತ್ರದ ಖ್ಯಾತ ಬಾಲ ನಟಿ ಬೇಬಿ ದೇವಾನಂದ ವಿಶೇಷ ಅತಿಥಿಯಾಗಿ ಭಾಗವಹಿಸಿ ಅಯ್ಯಪ್ಪ ಭಕ್ತಿಗೀತೆಯನ್ನ ಹಾಡಿ ನೆರೆದವರನ್ನ ರಂಜಿಸಿದರು. ಸಾಸ್ ವತಿಯಿಂದ ದೇವಾನಂದ್ ಅವರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಬಳಿಕ ಅಯ್ಯಪ್ಪ ಮಾಲಾಧಾರಿಗಳ ವೃತ ನಿಯಮ ಅನುಷ್ಠಾನಗಳು ಹಿಂದೆ, ಇಂದು, ನಾಳೆ ಎಂಬ ವಿಷಯದಲ್ಲಿ ವಿಚಾರ ಗೋಷ್ಠಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಚಿಂತಕರಾದ ಸತೀಶ್ ಪೂಜಾರಿ ಸಜಿಪ, ಪ್ರಕಾಶ್ ಮಲ್ಪೆ ಭಾಗವಹಿಸಿದ್ದರು.
ಸೋಮನಾಥ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ಹೊಳ್ಳ ಸಮಾವೇಶ ಉದ್ಘಾಟಿಸಿದರು. ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಜಿಲ್ಲಾಧ್ಯಕ್ಷ ಗಣೇಶ್ ಪೊದುವಾಳ್ ಅಧ್ಯಕ್ಷತೆ ವಹಿಸಿದ್ದರು.
It is impossible to walk without slippers. Don't wear garlands to give up gutka and tobacco. Sri Yogananda Saraswathi Swamiji of Nithyananda Yogaashrama in Kondevoor said that it is not tolerable for a maladhari man to ride a vehicle with his wife.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm