ಬ್ರೇಕಿಂಗ್ ನ್ಯೂಸ್
18-12-23 05:20 pm Mangalore Correspondent ಕರಾವಳಿ
ಉಳ್ಳಾಲ, ಡಿ.18: ವಿಶ್ವ ಅವಳಿ ದಿನಾಚರಣೆಯಂದು ಉಳ್ಳಾಲ ತಾಲೂಕಿನ ಕೈರಂಗಳ ಗ್ರಾಮದ ಶಾರದಾ-ಗಣಪತಿ ಅವಳಿ ಹೆಸರಿನ ಹೈಸ್ಕೂಲ್ ನೆನಪಾಗಲೇ ಬೇಕು. ಏಕೆಂದರೆ ಈ ಶಾಲೆಯಲ್ಲಿ ಬರೋಬ್ಬರಿ 17 ಜೋಡಿ ಅವಳಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಶಾಲೆಯ ಪ್ರಮುಖ ಆಕರ್ಷಣೆಯಾಗಿದೆ. ಇದರಲ್ಲಿ ಒಂದು ಅವಳಿಯನ್ನಾದರೂ ಸೈನ್ಯಕ್ಕೆ ಸೇರಿಸೋ ಮಹದಾಸೆ ಶಾಲಾ ಸಂಚಾಲಕರದ್ದಾಗಿದೆ.
ಸಂಸ್ಕಾರಯುತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಸಂಸ್ಥೆಗಳಲ್ಲಿ ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಸಂಸ್ಥೆ ಮುಂಚೂಣಿಯಲ್ಲಿದ್ದು ಇದೀಗ ರಾಜ್ಯ ಮಟ್ಟದಲ್ಲಿ ಗಮನ ಸೆಳೆಯಲು ಕಾರಣವಾಗಿದ್ದು ಈ ಸಂಸ್ಥೆಯಲ್ಲಿ ಪ್ರಸ್ತುತ ಬರೋಬ್ಬರಿ 17 ಅವಳಿ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು. ಪ್ರಸ್ತುತ ಕಾಲಘಟ್ಟದಲ್ಲಿ ಅವಳಿ ಮಕ್ಕಳನ್ನು ಪ್ರಸವಿಸುವ ತಾಯಂದಿರ ಸಂಖ್ಯೆಯೇ ಕಡಿಮೆ ಆಗಿದ್ದು ಒಂದು ಜೋಡಿ ಅವಳಿ ಮಕ್ಕಳನ್ನು ಕಾಣುವುದೇ ಖುಷಿಯ ವಿಚಾರ, ಇಲ್ಲಿ ಹದಿನೇಳು ಅವಳಿ ಮಕ್ಕಳಿದ್ದಾರೆ, ಚಕಿತವಾದರೂ ಇದು ಸತ್ಯ.


ಶಾಲೆಯಲ್ಲಿರುವ ಅವಳಿಗಳ ಪೈಕಿ ಎಸ್ ಎಸ್ ಎಲ್ ಸಿ ತರಗತಿಯಲ್ಲಿ ಒಂದು ಜೋಡಿಯಿದ್ದರೆ, ಒಂಬತ್ತರಲ್ಲಿ ಮೂರು ಜೋಡಿ, ಎಂಟರಲ್ಲಿ ಒಂದು ಜೋಡಿ, ಏಳರಲ್ಲಿ ಎರಡು ಜೋಡಿ, ಆರರಲ್ಲಿ ಮೂರು ಜೋಡಿ, ಪ್ರಥಮ ತರಗತಿಯಲ್ಲಿ ಒಂದು ಜೋಡಿ, ಯುಕೆಜಿಯಲ್ಲಿ ಮೂರು ಜೋಡಿ, ಎಲ್ ಕೆ ಜಿ ಯಲ್ಲಿ ಒಂದು ಜೋಡಿ, ಎರಡನೇ ತರಗತಿಯಲ್ಲಿ ಎರಡು ಜೋಡಿ ಅವಳಿ ಮಕ್ಕಳಿದ್ದಾರೆ. ಅದರಲ್ಲಿ ಆರು ಜೋಡಿ ಹೆಣ್ಣು ಮತ್ತು ಆರು ಜೋಡಿ ಗಂಡು ಮಕ್ಕಳಾಗಿದ್ದಾರೆ. ಐದು ಜೋಡಿ ಹೆಣ್ಣು-ಗಂಡು ಅವಳಿ ಇದ್ದಾರೆ.


ನಮ್ಮ ಶಾಲೆಯ ಹೆಸರೇ ಶಾರದಾ-ಗಣಪತಿ ಎಂದು ಅವಳಿಯಾಗಿದೆ. ತುಳುನಾಡ ಅವಳಿ ವೀರರಾದ ಕೋಟಿ -ಚೆನ್ನಯರ ಆದರ್ಶದಲ್ಲಿ ನಡೆಯೋ ಶಾಲೆಯಿದು. ಲವ-ಕುಶರ ಆದರ್ಶದ ಆಧಾರದಲ್ಲಿ ಮಕ್ಕಳಿಗೆ ಭಾರತೀಯ ಸಂಸ್ಕ್ರತಿಯ ಶಿಕ್ಷಣವನ್ನ ಭೋದಿಸುತ್ತಿದ್ದೇವೆ. ಒಂದು ಅವಳಿ ಮಕ್ಕಳಾದರೂ ದೇಶದ ಸೈನ್ಯಕ್ಕೆ ಸೇರಿ ಭಾರತಾಂಬೆಯ ಸೇವೆಗೈಯುವ ಮಹದಾಸೆ ಇಟ್ಟುಕೊಂಡಿದ್ದು ಅದನ್ನ ಖಂಡಿತ ಈಡೇರಿಸುವುದಾಗಿ ಶಾಲಾ ಸಂಚಾಲಕ ಟಿ.ಜಿ ರಾಜಾರಾಂ ಭಟ್ ಹೇಳಿದ್ದಾರೆ.
17 ಅವಳಿಗಳಲ್ಲಿ ಆರ್ಥಿಕವಾಗಿ ಹಿಂದುಳಿದಿರುವ 5 ಅವಳಿ ಮಕ್ಕಳಿಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುತ್ತಿದ್ದು, ಇತರ ಅಶಕ್ತ ಕುಟುಂಬದ ಮಕ್ಕಳಿಗೂ ಉಚಿತ ಮತ್ತು ರಿಯಾಯಿತಿಯಲ್ಲಿ ಶಿಕ್ಷಣ ನೀಡುತ್ತಿರುವುದಾಗಿ ರಾಜಾರಾಂ ಭಟ್ ತಿಳಿಸಿದ್ದಾರೆ.
On World Twin Day, one must remember the high school named after Sharada and Ganapathi at Kairangala village in Ullal taluk. The main attraction of the school is that there are 17 pairs of twins studying in the school. The school convenor wants to enlist at least one of these twins in the army.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm