ಬ್ರೇಕಿಂಗ್ ನ್ಯೂಸ್
19-12-23 11:13 am Mangalore Correspondent ಕರಾವಳಿ
ಉಳ್ಳಾಲ, ಡಿ.19: ಸೋಮೇಶ್ವರ ಕಡಲ ತೀರದಲ್ಲಿ ಇಂದು ಬೆಳಗ್ಗೆ ಮಹೇಶ್ ಟ್ರಾವೆಲ್ಸ್ ಬಸ್ ಚಾಲಕನ ಮೃತದೇಹ ಸಿಕ್ಕಿದ್ದು, ರುದ್ರಪಾದೆಯಿಂದ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕೋಟೆಕಾರು ಪಟ್ಟಣದ ಕೊಂಡಾಣ, ವಿದ್ಯಾನಗರ ನಿವಾಸಿ ಜಗದೀಶ್ ಶೆಟ್ಟಿ(38)ಮೃತ ವ್ಯಕ್ತಿ. ಜಗದೀಶ್ ಅವರು 43 ರೂಟ್ ಸಂಖ್ಯೆಯ ಮಂಗಳೂರು- ತಲಪಾಡಿಯ ನಡುವೆ ಓಡಾಟ ನಡೆಸುತ್ತಿದ್ದ ಖಾಸಗಿ ಬಸ್ ಮಹೇಶ್ ಟ್ರಾವೆಲ್ಸ್ ನಲ್ಲಿ ಚಾಲಕರಾಗಿದ್ದರು. ಜಗದೀಶ್ ನಿನ್ನೆ ರಾತ್ರಿ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಜಗದೀಶ್ ಅವರ ಮೃತದೇಹ ಸೋಮೇಶ್ವರ ಕಡಲಲ್ಲಿ ತೇಲುತ್ತಿದ್ದು ಸ್ಥಳೀಯ ಮೀನುಗಾರರು ಅದನ್ನ ಎಳೆದು ದಡಕ್ಕೆ ಹಾಕಿದ್ದಾರೆ. ರುದ್ರಪಾದೆಯಲ್ಲಿ ಜಗದೀಶ್ ಅವರು ಧರಿಸಿದ್ದ ಚಪ್ಪಲ್, ಮೊಬೈಲ್, ಬೈಕ್ ಕೀ ಗೊಂಚಲು ದೊರಕಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಹೇಶ್ ಟ್ರಾವೆಲ್ಸ್ ಬಸ್ಸು ಮಾಲಕ ಪ್ರಕಾಶ್ ಶೇಖ ಕೂಡ ಕೆಲ ತಿಂಗಳ ಹಿಂದಷ್ಟೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಮಹೇಶ್ ಟ್ರಾವೆಲ್ಸಲ್ಲೇ ಕ್ಲೀನರ್, ನಿರ್ವಾಹಕ ವೃತ್ತಿ ಮಾಡಿ ಕಳೆದ ಹಲವು ವರುಷಗಳಿಂದ ಚಾಲಕರಾಗಿದ್ದ ಜಗದೀಶ್ ಆತ್ಮಹತ್ಯೆಗೈದಿರುವುದು ಅವರ ಮನೆ ಮಂದಿ, ಸ್ನೇಹಿತರನ್ನ ಆಘಾತಗೊಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಗದೀಶ್ ತಂದೆ ವೆಂಕಪ್ಪ ಶೆಟ್ಟಿ ಅಸೌಖ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅದೇ ಆಸ್ಪತ್ರೆಗೆ ಮಗನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತ ಜಗದೀಶ್ ಅವಿವಾಹಿತರಾಗಿದ್ದು ತಾಯಿ, ತಂದೆ ಇಬ್ಬರು ಅಣ್ಣಂದಿರನ್ನ ಅಗಲಿದ್ದಾರೆ.
Mahesh bus Travels driver commits suicide at Someshwar Beach in Mangalore. The deceased has been identifed as Jagadish Shetty (48). Ullal police are at the spot.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm