ಬ್ರೇಕಿಂಗ್ ನ್ಯೂಸ್
19-12-23 11:13 am Mangalore Correspondent ಕರಾವಳಿ
ಉಳ್ಳಾಲ, ಡಿ.19: ಸೋಮೇಶ್ವರ ಕಡಲ ತೀರದಲ್ಲಿ ಇಂದು ಬೆಳಗ್ಗೆ ಮಹೇಶ್ ಟ್ರಾವೆಲ್ಸ್ ಬಸ್ ಚಾಲಕನ ಮೃತದೇಹ ಸಿಕ್ಕಿದ್ದು, ರುದ್ರಪಾದೆಯಿಂದ ಜಿಗಿದು ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕೋಟೆಕಾರು ಪಟ್ಟಣದ ಕೊಂಡಾಣ, ವಿದ್ಯಾನಗರ ನಿವಾಸಿ ಜಗದೀಶ್ ಶೆಟ್ಟಿ(38)ಮೃತ ವ್ಯಕ್ತಿ. ಜಗದೀಶ್ ಅವರು 43 ರೂಟ್ ಸಂಖ್ಯೆಯ ಮಂಗಳೂರು- ತಲಪಾಡಿಯ ನಡುವೆ ಓಡಾಟ ನಡೆಸುತ್ತಿದ್ದ ಖಾಸಗಿ ಬಸ್ ಮಹೇಶ್ ಟ್ರಾವೆಲ್ಸ್ ನಲ್ಲಿ ಚಾಲಕರಾಗಿದ್ದರು. ಜಗದೀಶ್ ನಿನ್ನೆ ರಾತ್ರಿ ಮನೆಗೆ ತೆರಳದೆ ನಾಪತ್ತೆಯಾಗಿದ್ದರು.
ಇಂದು ಬೆಳಗ್ಗೆ ಜಗದೀಶ್ ಅವರ ಮೃತದೇಹ ಸೋಮೇಶ್ವರ ಕಡಲಲ್ಲಿ ತೇಲುತ್ತಿದ್ದು ಸ್ಥಳೀಯ ಮೀನುಗಾರರು ಅದನ್ನ ಎಳೆದು ದಡಕ್ಕೆ ಹಾಕಿದ್ದಾರೆ. ರುದ್ರಪಾದೆಯಲ್ಲಿ ಜಗದೀಶ್ ಅವರು ಧರಿಸಿದ್ದ ಚಪ್ಪಲ್, ಮೊಬೈಲ್, ಬೈಕ್ ಕೀ ಗೊಂಚಲು ದೊರಕಿದೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಮಹೇಶ್ ಟ್ರಾವೆಲ್ಸ್ ಬಸ್ಸು ಮಾಲಕ ಪ್ರಕಾಶ್ ಶೇಖ ಕೂಡ ಕೆಲ ತಿಂಗಳ ಹಿಂದಷ್ಟೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದರು. ಮಹೇಶ್ ಟ್ರಾವೆಲ್ಸಲ್ಲೇ ಕ್ಲೀನರ್, ನಿರ್ವಾಹಕ ವೃತ್ತಿ ಮಾಡಿ ಕಳೆದ ಹಲವು ವರುಷಗಳಿಂದ ಚಾಲಕರಾಗಿದ್ದ ಜಗದೀಶ್ ಆತ್ಮಹತ್ಯೆಗೈದಿರುವುದು ಅವರ ಮನೆ ಮಂದಿ, ಸ್ನೇಹಿತರನ್ನ ಆಘಾತಗೊಳಿಸಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಗದೀಶ್ ತಂದೆ ವೆಂಕಪ್ಪ ಶೆಟ್ಟಿ ಅಸೌಖ್ಯದಿಂದ ಬಳಲುತ್ತಿದ್ದು ಮೂರು ದಿನಗಳ ಹಿಂದೆ ದೇರಳಕಟ್ಟೆಯ ಕೆ.ಎಸ್ .ಹೆಗ್ಡೆ ಆಸ್ಪತ್ರೆಗೆ ದಾಖಲಾಗಿದ್ದು, ಇಂದು ಅದೇ ಆಸ್ಪತ್ರೆಗೆ ಮಗನ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಮೃತ ಜಗದೀಶ್ ಅವಿವಾಹಿತರಾಗಿದ್ದು ತಾಯಿ, ತಂದೆ ಇಬ್ಬರು ಅಣ್ಣಂದಿರನ್ನ ಅಗಲಿದ್ದಾರೆ.
Mahesh bus Travels driver commits suicide at Someshwar Beach in Mangalore. The deceased has been identifed as Jagadish Shetty (48). Ullal police are at the spot.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm