ಬ್ರೇಕಿಂಗ್ ನ್ಯೂಸ್
20-12-23 06:50 pm Mangalore Correspondent ಕರಾವಳಿ
ಉಳ್ಳಾಲ, ಡಿ.20: ಕರಾವಳಿಯಲ್ಲಿ ಶಾಲೆಯ ವಾರ್ಷಿಕೋತ್ಸವದಲ್ಲೂ ಧರ್ಮದಂಗಲ್ ಸದ್ದು ಮಾಡಿದೆ. ಕೋಟೆಕಾರಿನ ಕಾರ್ಮೆಲ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವದಂದು ಶಾಲಾಡಳಿತವು ವಾಹನಗಳನ್ನ ರಸ್ತೆಗಳಲ್ಲೇ ನಿಲ್ಲಿಸಿ ಹಿಂದೂ ವ್ಯಾಪಾರಿಗಳಿಗೆ ಅಡ್ಡಿ ಪಡಿಸಿದ್ದಲ್ಲದೆ ಪೊಲೀಸರನ್ನ ಕರೆಸಿ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದವರನ್ನ ಓಡಿಸಲು ಪ್ರಯತ್ನಿಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ಕೋಟೆಕಾರಿನ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಸಂಜೆ ಶಾಲಾ ವಾರ್ಷಿಕೋತ್ಸವವನ್ನ ಹಮ್ಮಿಕೊಳ್ಳಲಾಗಿತ್ತು. ಪ್ರತೀ ವರ್ಷವೂ ಶಾಲಾ ವಾರ್ಷಿಕೋತ್ಸವದಂದು ಬಡ ಚರುಂಬುರಿ ಮತ್ತು ಐಸ್ ಕ್ರೀಂ ವ್ಯಾಪಾರಿಗಳು ಶಾಲೆಯ ಗೇಟಿನ ಹೊರಗಡೆ ವ್ಯಾಪಾರ ನಡೆಸುತ್ತಿದ್ದರು. ಆದರೆ ಈ ಬಾರಿ ಶಾಲಾಡಳಿತವು ವಾರ್ಷಿಕೋತ್ಸವಕ್ಕೆ ಬಂದ ಪೋಷಕರ ವಾಹನಗಳನ್ನ ಗೇಟ್ ಒಳಗಡೆ ಬಿಡದೆ ಗೇಟಿಗೆ ಬೀಗ ಜಡಿದಿದೆ. ಶಾಲೆಯ ಕ್ಯಾಂಪಸ್ ಒಳಗಡೆ ಪಾರ್ಕಿಂಗ್ ಲಾಟ್ ಅಲ್ಲದೆ ವಿಶಾಲ ಮೈದಾನವಿದ್ದರೂ ಉದ್ದೇಶ ಪೂರ್ವಕವಾಗಿ ಹೆದ್ದಾರಿಯ ಸರ್ವಿಸ್ ರಸ್ತೆಗಳಲ್ಲೇ ಪೋಷಕರು ವಾಹನಗಳನ್ನ ಪಾರ್ಕ್ ಮಾಡುವಂತೆ ಮಾಡಿದ್ದಾರೆ. ಶಾಲೆಯ ಗೇಟ್ ಬಳಿ ವ್ಯಾಪಾರ ಶುರು ಹಚ್ಚಿದ್ದ ಚರ್ಮುರಿ ಸ್ಟಾಲ್ ಗಳ ಮುಂದೆಯೇ ವಾಹನಗಳನ್ನ ಪಾರ್ಕ್ ಮಾಡಲಾಗಿದೆ.


ಇಷ್ಟಲ್ಲದೆ ಶಾಲಾಡಳಿತವು ಸ್ಥಳಕ್ಕೆ ಉಳ್ಳಾಲ ಪೊಲೀಸರನ್ನ ಕರೆಸಿ ವ್ಯಾಪಾರಿಗಳನ್ನ ಓಡಿಸಲು ಪ್ರಯತ್ನಿಸಿದೆ. ಸ್ಥಳಕ್ಕೆ ಬಂದ ಉಳ್ಳಾಲ ಎಎಸ್ ಐ ವೆಂಕಟೇಶ್ ಚಂದ್ರಗಿರಿ ಎಂಬವರು ಬಡಪಾಯಿ ಚರ್ಮುರಿ ವ್ಯಾಪಾರಸ್ಥ ಮಹಿಳೆಯರಿಗೆ ಆವಾಝ್ ಹಾಕಿ ಸ್ಥಳದಿಂದ ತೆರಳುವಂತೆ ಗದರಿದ್ದಾರೆ. ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲೇ ವಾಹನಗಳನ್ನ ಪಾರ್ಕ್ ಮಾಡಿ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಶಾಲಾಡಳಿತದ ಪರವೇ ಬ್ಯಾಟ್ ಬೀಸಿದ ಎಎಸ್ ಐ ವೆಂಕಟೇಶನನ್ನ ವ್ಯಾಪಾರಿಗಳು ತರಾಟೆಗೆ ತೆಗೆದಿದ್ದು ವೆಂಕಟೇಶ್ ಸ್ಥಳದಿಂದ ಕಾಲ್ಕಿತ್ತಿದ್ದಾರೆ.



ನಾವು ಬೀದಿ ಬದಿ ವ್ಯಾಪಾರಿಗಳು. ಸರಕಾರವೇ ನಮಗೆ ಸಾಲ ನೀಡಿದ್ದು. ಸಣ್ಣ ವ್ಯಾಪಾರ ಮಾಡುತ್ತಿದ್ದೇವೆ. ಇಂತವರು ನಮ್ಮನ್ನ ವ್ಯಾಪಾರ ಮಾಡಲು ಬಿಡದಿದ್ದರೆ ನಾವು ಸಾಲವನ್ನ ಮರು ಪಾವತಿಸುವುದಾದರೂ ಹೇಗೆಂದು ಚರ್ಮುರಿ ವ್ಯಾಪಾರಸ್ಥ ಮಹಿಳೆಯರು ಅಲವತ್ತು ತೋಡಿದ್ದಾರೆ. ಹೆದ್ದಾರಿಯ ಸರ್ವಿಸ್ ರಸ್ತೆಯುದ್ದಕ್ಕೂ ಪಾರ್ಕಿಂಗ್ ಮಾಡಿ ಸಂಚಾರಕ್ಕೆ ತೊಡಕುಂಟು ಮಾಡಿದ ಶಾಲಾಡಳಿತದ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವಂತೆ ವ್ಯಾಪಾರಿಗಳು ಒತ್ತಾಯಿಸಿದ್ದಾರೆ.
ಹಿಂದು ಸಮುದಾಯದ ಮೇಲೆ ಹಗೆ ಸಾಧನೆ..?
ಕಾರ್ಮೆಲ್ ಶಾಲೆಯಲ್ಲಿ ತಿಂಗಳ ಹಿಂದೆ ಶಾಲಾಡಳಿತವೇ ತಲೆ ತಗ್ಗಿಸುವಂತಹ ಘಟನೆ ನಡೆದಿದ್ದು ಆ ವಿಚಾರ ಪಿಟಿಎ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಪಿಟಿಎ ಸಭೆಯಲ್ಲಿ ಪ್ರಸ್ತಾಪವಾದ ವಿಚಾರವು ಮಾಧ್ಯಮಗಳಿಗೆ ಆಹಾರವಾದದ್ದು ಹೇಗೆಂದು ಶಾಲಾ ಪ್ರಾಂಶುಪಾಲರು ಹಿಂದೂ ಸಿಬ್ಬಂದಿಗಳ ಮೇಲೆಯೇ ಅನುಮಾನ ಪಟ್ಟು ವ್ಯಗ್ರರಾಗಿದ್ದರು ಎನ್ನಲಾಗಿದೆ. ಬುಧವಾರ ನಡೆದ ವಾರ್ಷಿಕೋತ್ಸವಕ್ಕೂ ಮೈಕ್, ಕ್ಯಾಟರಿಂಗ್, ವಿಡಿಯೋ ರೆಕಾರ್ಡಿಂಗನ್ನು ಕ್ರೈಸ್ತ ಧರ್ಮೀಯರಿಗೆ ಶಾಲಾಡಳಿತ ನೀಡಿದ್ದು ಹಿಂದೂಗಳನ್ನ ದೂರ ಇಟ್ಟಿರೋದಾಗಿ ತಿಳಿದು ಬಂದಿದೆ. ಹಿಂದೂ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿರುವ ಶಾಲೆಯಲ್ಲಿ ಧರ್ಮ ದಂಗಲ್ ಶುರುವಾದದ್ದು ವಿಪರ್ಯಾಸ.
Mangalore Kotekar Carmel school annual day, fight for Hindu Muslim stalls. Muslim stalls have been given first priority whereas Hindu stalls have been said to vacate place by Police.
09-04-26 03:37 pm
HK News Staffer
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm