ಬ್ರೇಕಿಂಗ್ ನ್ಯೂಸ್
18-11-20 02:26 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 18 : ಮರಾಠ ಅಭಿವೃದ್ಧಿ ಪ್ರಾಧಿಕಾರ ವಿಚಾರದಲ್ಲಿ ಪರ - ವಿರೋದ ಕೇಳಿಬರುತ್ತಿದ್ದಂತೆ ಮಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಐವನ್ ಡಿಸೋಜಾ ಕೌಂಟರ್ ಹೊಡೆದಿದ್ದಾರೆ.
ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುತ್ತೇವೆ ಎಂದು ಹೇಳುತ್ತಾ ಬಂದಿರಿ. 50 ಕೋಟಿ ಮೀಸಲಿಡುವ ಮಾತನ್ನೂ ಆಡಿದ್ರಿ. ಆದರೆ, ಕ್ರೈಸ್ತ ನಿಗಮ ಜಾರಿಗೊಳಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ ಐವನ್ ಡಿಸೋಜ, ಕ್ರೈಸ್ತರಲ್ಲಿಯೂ ಬಡ ಜನರಿದ್ದಾರೆ. ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ನಮ್ಮ ಒತ್ತಾಯವೂ ಇತ್ತು. ಆದರೆ ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಕಿಡಿಕಾರಿದರು.
ನಿಗಮ ಸ್ಥಾಪನೆ ಮಾಡದಿದ್ದರೆ ರಾಜ್ಯದ ಕ್ರೈಸ್ತರನ್ನ ಹೋರಾಟಕ್ಕೆ ಧುಮುಕುವಂತೆ ಮಾಡುತ್ತೇವೆ. ಜನರು ಬೀದಿಗೆ ಬಂದರೆ ಸರಕಾರವೇ ನೇರ ಹೊಣೆ. ಕ್ರೈಸ್ತರನ್ನ ಅಂಡರ್ ಎಸ್ಟಿಮೇಟ್ ಮಾಡುವುದು ಬೇಡ. ಕ್ರೈಸ್ತ ಸಮುದಾಯದ ಮೌನ, ಅವರ ವೀಕ್ನೆಸ್ ಅಲ್ಲ. ಬಿಷಪ್ ಸನ್ಮಾನ ಸ್ವೀಕರಿಸಿ ಹೋದ ಸಿಎಂ, ನಿಗಮಕ್ಕೆ ಅನುಮೋದನೆ ನೀಡುವುದಾಗಿ ಹೇಳಿದ್ದರು. ಆದರೆ ಆನಂತರ ಯಾಕಾಗಿ ರದ್ದು ಮಾಡಿದ್ದೀರಿ? ಇದರ ಹಿಂದಿನ ಅಜೆಂಡಾ ಏನು ? ತಕ್ಷಣವೇ ಸಿಎಂ ಇದಕ್ಕೆ ಉತ್ತರ ಕೊಡಬೇಕು ಎಂದು ಐವಾನ್ ಒತ್ತಾಯಿಸಿದರು.
55 ಕೋಟಿ ನಿಗಮಕ್ಕಾಗಿ ಇಟ್ಟಿದ್ದು ಏನು ಮಾಡಿದ್ದೀರಿ ಎಂದು ಕೇಳಿದ ಐವನ್ ಡಿಸೋಜ, 2008 ರಲ್ಲಿ ಚರ್ಚ್ ದಾಳಿಯಾದಾಗಲೂ ಕ್ರೈಸ್ತರು ತಾಳ್ಮೆ ವಹಿಸಿದ್ದರು. ಆದರೆ ಸರಕಾರ ಕ್ರೈಸ್ತರಿಗಾಗಿ ಚಿಕ್ಕಾಸು ಖರ್ಚು ಮಾಡಿಲ್ಲ. ನಿಗಮ ಕೊಟ್ಟಿದ್ದೇವೆ ಅಂತಾ ಜಾಹೀರಾತು ನೀಡಿದ್ದರು. ಆದರೆ, ಅನುಷ್ಠಾನಕ್ಕೆ ತಂದಿಲ್ಲ. ಕ್ರೈಸ್ತರನ್ನ ಮಂಗಗಳು ಎಂದು ಭಾವಿಸಿಕೊಂಡಿದ್ದಾರೆಯೇ ಸಿಎಂ ಯಡಿಯೂರಪ್ಪ ಎಂದ ಐವನ್ ಡಿಸೋಜಾ ಕಿಡಿಕಾರಿದ್ದಾರೆ.
Video:
Former MLC Ivan D'Souza urged CM BS Yediyurappa to reinstate Christian Development Corporation and asked for a justification to the community and reason behind rejecting the corporation.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm