ಬ್ರೇಕಿಂಗ್ ನ್ಯೂಸ್
20-12-23 08:13 pm Mangalore Correspondent ಕರಾವಳಿ
ಮಂಗಳೂರು, ಡಿ.20: ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫುಡ್ ಇನ್ನಿತರ ಡೆಲಿವರಿ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಉಚಿತ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ಇದಕ್ಕಾಗಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
ಈ ಯೋಜನೆ ಸಂಪೂರ್ಣ ಉಚಿತವಾಗಿದ್ದು ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಮಾದರಿಯ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರಿಗೆ ಈ ಯೋಜನೆ ಲಭ್ಯವಿದೆ.
ಯೋಜನೆ ಸೌಲಭ್ಯಗಳು
18ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ಮಾಡುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ, ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ದೂ.ಸಂಖ್ಯೆ: 0824-2435343, 0824-2433132 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For the first time in the country, a free insurance scheme has been launched for food and other delivery workers working in Karnataka. All eligible gig workers can register for the same on the Seva Sindhu portal. The insurance facility will also be applicable for accidents occurring while on duty or not.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm