ಬ್ರೇಕಿಂಗ್ ನ್ಯೂಸ್
20-12-23 08:13 pm Mangalore Correspondent ಕರಾವಳಿ
ಮಂಗಳೂರು, ಡಿ.20: ಕರ್ನಾಟಕ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫುಡ್ ಇನ್ನಿತರ ಡೆಲಿವರಿ ಕಾರ್ಮಿಕರಿಗೆ ದೇಶದಲ್ಲಿಯೇ ಮೊದಲ ಬಾರಿಗೆ ಉಚಿತ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಎಲ್ಲಾ ಅರ್ಹ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ನಲ್ಲಿ ಇದಕ್ಕಾಗಿ ನೋಂದಾಯಿಸಬಹುದು. ವಿಮಾ ಸೌಲಭ್ಯವು ಕರ್ತವ್ಯದಲ್ಲಿ ಅಥವಾ ಇಲ್ಲದಿರುವಾಗ ಸಂಭವಿಸುವ ಅಪಘಾತಗಳಿಗೂ ಅನ್ವಯವಾಗಲಿದೆ.
ಈ ಯೋಜನೆ ಸಂಪೂರ್ಣ ಉಚಿತವಾಗಿದ್ದು ಯಾವುದೇ ರೀತಿಯ ಪ್ರೀಮಿಯಂ ಪಾವತಿಸುವ ಅಗತ್ಯತೆ ಇರುವುದಿಲ್ಲ. ಸ್ವಿಗ್ಗಿ, ಜೊಮಾಟೋ ಮಾದರಿಯ ಸಂಸ್ಥೆಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೆಜಾನ್, ಪ್ಲಿಫ್ಕಾರ್ಟ್, ಪೋರ್ಟರ್, ಫಾರ್ಮಸಿ, ಬ್ಲಿಂಕಿಟ್, ಜೆಪ್ಪೋ, ಬಿಗ್ ಬಾಸ್ಕೆಟ್, ಡಾಮಿನೋಜ್ ಮುಂತಾದ ಸಂಸ್ಥೆಗಳಲ್ಲಿ ಡೆಲಿವರಿ ವೃತ್ತಿಯಲ್ಲಿ ತೊಡಗಿಸಿಕೊಂಡ ಎಲ್ಲಾ ಅಸಂಘಟಿತ ಗಿಗ್ ಕಾರ್ಮಿಕರಿಗೆ ಈ ಯೋಜನೆ ಲಭ್ಯವಿದೆ.
ಯೋಜನೆ ಸೌಲಭ್ಯಗಳು
18ರಿಂದ 60 ವರ್ಷದೊಳಗಿನ ಗಿಗ್ ಕಾರ್ಮಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ತಮ್ಮ ಹೆಸರು ನೋಂದಾಯಿಸಬೇಕು. ಆದರೆ ಆದಾಯ ತೆರಿಗೆ ಪಾವತಿದಾರರಾಗಿರಬಾರದು. ಭವಿಷ್ಯನಿಧಿ ಹಾಗೂ ಇ.ಎಸ್.ಐ ಫಲಾನುಭವಿಯಾಗಿರಬಾರದು ಹಾಗೂ ಕರ್ನಾಟಕದಲ್ಲಿ ಡೆಲಿವರಿ ಕಾರ್ಯ ಮಾಡುತ್ತಿರುವವರಿಗೆ ಮಾತ್ರ ಅನ್ವಯಿಸುತ್ತದೆ. ಆಧಾರ್ ಸಂಖ್ಯೆ, ವೃತ್ತಿ ನಿರ್ವಹಿಸುತ್ತಿರುವ ಸಂಸ್ಥೆಗಳು ವಿತರಿಸಿದ ಗುರುತಿನ ಚೀಟಿ, ವೇತನ ಚೀಟಿ, ವೇತನ ಪಡೆದ ಬ್ಯಾಂಕ್ ಪಾಸ್ ಬುಕ್ ಹಾಗೂ ಇ-ಶ್ರಮ್ ಕಾರ್ಡ್ ಈ ಎಲ್ಲಾ ದಾಖಲೆಗಳನ್ನು ಹೊಂದಿರಬೇಕು.
ಹೆಚ್ಚಿನ ಮಾಹಿತಿಗೆ ಕಾರ್ಮಿಕ ಅಧಿಕಾರಿಯವರ ಕಚೇರಿ, ಕಾರ್ಮಿಕ ನಿರೀಕ್ಷಕರ ಕಚೇರಿ ಅಥವಾ ದೂ.ಸಂಖ್ಯೆ: 0824-2435343, 0824-2433132 ಸಂಪರ್ಕಿಸುವಂತೆ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
For the first time in the country, a free insurance scheme has been launched for food and other delivery workers working in Karnataka. All eligible gig workers can register for the same on the Seva Sindhu portal. The insurance facility will also be applicable for accidents occurring while on duty or not.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm