ಬ್ರೇಕಿಂಗ್ ನ್ಯೂಸ್
20-12-23 10:18 pm Mangalore Correspondent ಕರಾವಳಿ
ಬಂಟ್ವಾಳ, ಡಿ.20: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಲದ ಬಡ್ಡಿ ವಿಚಾರದಲ್ಲಿ ಯೋಜನೆಯ ಸದಸ್ಯರು ಮತ್ತು ಸೌಜನ್ಯಾ ಪರ ಹೋರಾಟಗಾರರ ತಂಡದ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಸಜಿಪಮುನ್ನೂರಿನಲ್ಲಿ ನಡೆದಿದೆ.
ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರಾದ ಸಜಿಪಮುನ್ನೂರಿನ ಬೇಬಿ ಎಂಬವರ ಮನೆಯಲ್ಲಿ ಮಂಗಳವಾರ ಸಂಜೆ 25ರಷ್ಟು ಮಹಿಳೆಯರು ಮತ್ತು ಕೆಲವು ಪುರುಷರು ಸೇರಿದ್ದರು. ಸೌಜನ್ಯಾ ಪರ ಹೋರಾಟದಲ್ಲಿರುವ ಕಾರ್ಕಳದ ಸಾಣೂರಿನಿಂದ ಬಂದಿದ್ದ ಶೈಲಜಾ ಶೆಟ್ಟಿ, ಯೋಗೀಶ್ ಶೆಟ್ಟಿ, ಮುಡಿಪು ರವೀಂದ್ರ ಶೆಟ್ಟಿ, ಕೃಷ್ಣ ಸರಪಾಡಿ, ಗಣೇಶ್ ಕಂಟಲ್ಪಾಡಿ ಎಂಬವರು ಬೇಬಿ ಎಂಬವರ ಮನೆಗೆ ಬಂದಿದ್ದರು. ಈ ವೇಳೆ, ಸಾಲದಲ್ಲಿ ಬಡ್ಡಿ ಎಷ್ಟು ಕಟ್ಟುತ್ತೀರಿ ಎಂಬ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿತ್ತು.
ಶೈಲಜಾ ಶೆಟ್ಟಿ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ, ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಅಲ್ಲಿದ್ದವರು ತಕರಾರು ತೆಗೆದಿದ್ದಾರೆ. ಶೈಲಜಾ ಮತ್ತು ಅವರ ಜೊತೆಗೆ ತೆರಳಿದ್ದವರನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆಂದು ರವೀಂದ್ರ ಶೆಟ್ಟಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಕೆಲವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ರವೀಂದ್ರ ಶೆಟ್ಟಿ ಈ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯಲ್ಲಿದ್ದು ಈಗ ಆ ಕೆಲಸ ಬಿಟ್ಟು ಸೌಜನ್ಯಾ ಪರ ಹೋರಾಟದಲ್ಲಿ ತೊಡಗಿಸಿದ್ದಾರೆ.
ಸದರಿ ಘಟನೆಗೆ ಸಂಬಂಧಿಸಿ ಬೇಬಿ ಅವರು ಪ್ರತಿ ದೂರು ನೀಡಿದ್ದು, ತನ್ನ ಮನೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಸಭೆ ನಡೆಯತ್ತಿದ್ದಾಗ ಶೈಲಜಾ ಶೆಟ್ಟಿ, ಗಣೇಶ್ ಕಂಟಲ್ಪಾಡಿ, ಕೃಷ್ಣ ಸರಪಾಡಿ, ರವೀಂದ್ರ ಶೆಟ್ಟಿ, ಯೋಗೀಶ್ ಶೆಟ್ಟಿ ಬಂದು ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಕರಾರು ತೆಗೆದು ಅಲ್ಲಿದ್ದ ಸದಸ್ಯರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಬೇಬಿ ಅವರು ಬಿಸಿ ರೋಡ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎರಡೂ ದೂರುಗಳ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
Mangalore Sajipamunnur development members and Sowjanya case supporters fight assault over loan matter
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm