ಬ್ರೇಕಿಂಗ್ ನ್ಯೂಸ್
20-12-23 10:18 pm Mangalore Correspondent ಕರಾವಳಿ
ಬಂಟ್ವಾಳ, ಡಿ.20: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಸಾಲದ ಬಡ್ಡಿ ವಿಚಾರದಲ್ಲಿ ಯೋಜನೆಯ ಸದಸ್ಯರು ಮತ್ತು ಸೌಜನ್ಯಾ ಪರ ಹೋರಾಟಗಾರರ ತಂಡದ ಮಧ್ಯೆ ಹೊಯ್ ಕೈ ನಡೆದಿರುವ ಘಟನೆ ಸಜಿಪಮುನ್ನೂರಿನಲ್ಲಿ ನಡೆದಿದೆ.
ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರಾದ ಸಜಿಪಮುನ್ನೂರಿನ ಬೇಬಿ ಎಂಬವರ ಮನೆಯಲ್ಲಿ ಮಂಗಳವಾರ ಸಂಜೆ 25ರಷ್ಟು ಮಹಿಳೆಯರು ಮತ್ತು ಕೆಲವು ಪುರುಷರು ಸೇರಿದ್ದರು. ಸೌಜನ್ಯಾ ಪರ ಹೋರಾಟದಲ್ಲಿರುವ ಕಾರ್ಕಳದ ಸಾಣೂರಿನಿಂದ ಬಂದಿದ್ದ ಶೈಲಜಾ ಶೆಟ್ಟಿ, ಯೋಗೀಶ್ ಶೆಟ್ಟಿ, ಮುಡಿಪು ರವೀಂದ್ರ ಶೆಟ್ಟಿ, ಕೃಷ್ಣ ಸರಪಾಡಿ, ಗಣೇಶ್ ಕಂಟಲ್ಪಾಡಿ ಎಂಬವರು ಬೇಬಿ ಎಂಬವರ ಮನೆಗೆ ಬಂದಿದ್ದರು. ಈ ವೇಳೆ, ಸಾಲದಲ್ಲಿ ಬಡ್ಡಿ ಎಷ್ಟು ಕಟ್ಟುತ್ತೀರಿ ಎಂಬ ವಿಚಾರದಲ್ಲಿ ಮಾತಿಗೆ ಮಾತು ಬೆಳೆದಿತ್ತು.
ಶೈಲಜಾ ಶೆಟ್ಟಿ ಗ್ರಾಮಾಭಿವೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ, ನೀವು ತಪ್ಪು ಮಾಹಿತಿ ನೀಡುತ್ತಿದ್ದೀರಿ ಎಂದು ಅಲ್ಲಿದ್ದವರು ತಕರಾರು ತೆಗೆದಿದ್ದಾರೆ. ಶೈಲಜಾ ಮತ್ತು ಅವರ ಜೊತೆಗೆ ತೆರಳಿದ್ದವರನ್ನು ಮನೆಯಲ್ಲಿ ಕೂಡಿಹಾಕಿ ಹಲ್ಲೆ ನಡೆಸಿದ್ದಾರೆಂದು ರವೀಂದ್ರ ಶೆಟ್ಟಿ ಬಂಟ್ವಾಳ ನಗರ ಠಾಣೆಗೆ ದೂರು ನೀಡಿದ್ದಾರೆ. ಅಲ್ಲದೆ, ಕೆಲವರು ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ರವೀಂದ್ರ ಶೆಟ್ಟಿ ಈ ಹಿಂದೆ ಗ್ರಾಮಾಭಿವೃದ್ಧಿ ಯೋಜನೆಯಲ್ಲಿದ್ದು ಈಗ ಆ ಕೆಲಸ ಬಿಟ್ಟು ಸೌಜನ್ಯಾ ಪರ ಹೋರಾಟದಲ್ಲಿ ತೊಡಗಿಸಿದ್ದಾರೆ.
ಸದರಿ ಘಟನೆಗೆ ಸಂಬಂಧಿಸಿ ಬೇಬಿ ಅವರು ಪ್ರತಿ ದೂರು ನೀಡಿದ್ದು, ತನ್ನ ಮನೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಸಭೆ ನಡೆಯತ್ತಿದ್ದಾಗ ಶೈಲಜಾ ಶೆಟ್ಟಿ, ಗಣೇಶ್ ಕಂಟಲ್ಪಾಡಿ, ಕೃಷ್ಣ ಸರಪಾಡಿ, ರವೀಂದ್ರ ಶೆಟ್ಟಿ, ಯೋಗೀಶ್ ಶೆಟ್ಟಿ ಬಂದು ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ತಕರಾರು ತೆಗೆದು ಅಲ್ಲಿದ್ದ ಸದಸ್ಯರಿಗೆ ಹಲ್ಲೆ ನಡೆಸಿದ್ದಾರೆ. ಇದರಿಂದ ಬೇಬಿ ಅವರು ಬಿಸಿ ರೋಡ್ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಎರಡೂ ದೂರುಗಳ ಬಗ್ಗೆ ಬಂಟ್ವಾಳ ಠಾಣೆಯಲ್ಲಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಾಗಿದೆ.
Mangalore Sajipamunnur development members and Sowjanya case supporters fight assault over loan matter
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm