ಬ್ರೇಕಿಂಗ್ ನ್ಯೂಸ್
20-12-23 10:24 pm Mangalore Correspondent ಕರಾವಳಿ
ಮಂಗಳೂರು, ಡಿ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಕೊರೊನಾ ಟೆಸ್ಟಿಂಗ್ ಆರಂಭಿಸಿದ್ದು, ಮೊದಲ ದಿನವೇ ಒಂದು ಪಾಸಿಟಿವ್ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ ಸಂಬಂಧೀ ಕಾಯಿಲೆಯಿಂದ ದಾಖಲಾಗಿದ್ದ ಉಡುಪಿ ಮೂಲದ 82 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರನ್ನು ಅದೇ ಆಸ್ಪತ್ರೆಯಲ್ಲಿ ಐಸೊಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ, ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಸುದ್ದಿಗೋಷ್ಟಿ ಮೂಲಕ ಕೋವಿಡ್ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಕೇರಳ ಗಡಿಭಾಗದಲ್ಲಿ ಕಡ್ಡಾಯ ತಪಾಸಣೆಗೆ ಸೂಚನೆ ಬಂದಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ ಒಂದೆರಡು ಪ್ರಕರಣ ಪತ್ತೆಯಾಗಿದೆ. ಹಾಗೆಂದು ಆ ಭಾಗದಿಂದ ಬರೋರನ್ನು ನಿರ್ಬಂಧಿಸಲು ಮುಂದಾಗಿಲ್ಲ ಎಂದು ತಿಳಿಸಿದ್ದಾರೆ.
ಗಡಿಭಾಗವಾದ ಕಾರಣ ಕಾಸರಗೋಡು ಕಡೆಯಿಂದ ಹಲವಾರು ಮಂದಿ ಮಂಗಳೂರಿಗೆ ಬರ್ತಾರೆ. ರಾಜ್ಯ ಸರಕಾರದಿಂದ ಬಂದಿರುವ ಮಾರ್ಗಸೂಚಿ ಪ್ರಕಾರ, ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೂ ಸಭೆ ನಡೆಸಲಾಗಿದೆ. ಸಾರ್ವಜನಿಕರು ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ, ಅನಗತ್ಯ ಗೊಂದಲ ಮಾಡಿಕೊಳ್ಳುವುದೂ ಬೇಡ ಎಂದವರು ತಿಳಿಸಿದ್ದಾರೆ.
ಸದ್ಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಮುಂಜಾಗ್ರತೆ ಹಿನ್ನೆಲೆಯಲ್ಲಿ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಸಿದ್ದವಾಗಿಡಲು ಸೂಚಿಸಿದ್ದೇವೆ. ಇದರ ಜೊತೆಗೆ ಕಾಸರಗೋಡು ಗಡಿಗೆ ಹೊಂದಿಕೊಂಡಿರುವ ಸ್ವರ್ಗ, ಸಾರಡ್ಕ, ಜಾಲ್ಸೂರು, ತಲಪಾಡಿ, ಈಶ್ವರಮಂಗಲದಲ್ಲಿ ಅಲರ್ಟ್ ಇರಲು ಸೂಚಿಸಲಾಗಿದೆ. ಹಾಗೆಂದು, ಈ ಐದು ಕಡೆ ಯಾವುದೇ ನಿರ್ಬಂಧ ಇರೋದಿಲ್ಲ. ಆದರೆ ಅಲ್ಲಿಂದ ಬರೋರಿಗೆ ನಮ್ಮ ಸಿಬ್ಬಂದಿ ಮೈಕ್ ಮೂಲಕ ಮಾಹಿತಿ ಕೊಡ್ತಾರೆ. ನಮಗೆ ಗಡಿಯಲ್ಲಿ ತಪಾಸಣೆ ಮಾಡಲು ಸೂಚನೆ ಬಂದಿಲ್ಲ. ಜನರಿಗೆ ಮಾಹಿತಿ ಕೊಡ್ತೇವೆ, ಅಗತ್ಯ ಬಿದ್ದರೆ ತಪಾಸಣೆ ಮಾಡುತ್ತೇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಒಟ್ಟು ಸೇರಿ 10,986 ಬೆಡ್ ಇದೆ, 1376 ಆಕ್ಸಿಜನ್ ಸಪೋರ್ಟ್ ಬೆಡ್ ಗಳಿವೆ. ಐಸಿಯು ಬೆಡ್ 728, ವೆಂಟಿಲೇಟರ್ 336 ಇವೆ ಎಂದು ಹೇಳಿದ ಅವರು, ಕೇರಳದ ಶಬರಿಮಲೆಗೆ ಹೋಗಿ ಬಂದವರಿಗೆ ರೋಗ ಲಕ್ಷಣ ಇದ್ರೆ ಪರೀಕ್ಷೆಗೆ ಒಳಪಡಿಸುತ್ತೇವೆ. ಸದ್ಯ ನಮಗೆ ನಿತ್ಯ ಕನಿಷ್ಠ 321 ಜನರನ್ನು ಪರೀಕ್ಷೆ ಮಾಡುವ ಬಗ್ಗೆ ಗುರಿ ನೀಡಲಾಗಿದೆ. ಅದನ್ನು ಮಾಡುತ್ತೇವೆ ಎಂದು ಹೇಳಿದರು.
Mangalore One Corona positive case detected says DHO. No RTPCR In talapdy border, Ayyappa devotees should take care of themselves if any symptoms found says DHO Thimayya.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm