ಬ್ರೇಕಿಂಗ್ ನ್ಯೂಸ್
20-12-23 10:24 pm Mangalore Correspondent ಕರಾವಳಿ
ಮಂಗಳೂರು, ಡಿ.20: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರದಿಂದ ಕೊರೊನಾ ಟೆಸ್ಟಿಂಗ್ ಆರಂಭಿಸಿದ್ದು, ಮೊದಲ ದಿನವೇ ಒಂದು ಪಾಸಿಟಿವ್ ಕಂಡುಬಂದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನರ ಸಂಬಂಧೀ ಕಾಯಿಲೆಯಿಂದ ದಾಖಲಾಗಿದ್ದ ಉಡುಪಿ ಮೂಲದ 82 ವರ್ಷದ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಅವರನ್ನು ಅದೇ ಆಸ್ಪತ್ರೆಯಲ್ಲಿ ಐಸೊಲೇಶನ್ ವಾರ್ಡಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ, ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಸುದ್ದಿಗೋಷ್ಟಿ ಮೂಲಕ ಕೋವಿಡ್ ಮಾರ್ಗಸೂಚಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಕೇರಳ ಗಡಿಭಾಗದಲ್ಲಿ ಕಡ್ಡಾಯ ತಪಾಸಣೆಗೆ ಸೂಚನೆ ಬಂದಿಲ್ಲ. ಕಾಸರಗೋಡು ಜಿಲ್ಲೆಯಲ್ಲಿ ಒಂದೆರಡು ಪ್ರಕರಣ ಪತ್ತೆಯಾಗಿದೆ. ಹಾಗೆಂದು ಆ ಭಾಗದಿಂದ ಬರೋರನ್ನು ನಿರ್ಬಂಧಿಸಲು ಮುಂದಾಗಿಲ್ಲ ಎಂದು ತಿಳಿಸಿದ್ದಾರೆ.
ಗಡಿಭಾಗವಾದ ಕಾರಣ ಕಾಸರಗೋಡು ಕಡೆಯಿಂದ ಹಲವಾರು ಮಂದಿ ಮಂಗಳೂರಿಗೆ ಬರ್ತಾರೆ. ರಾಜ್ಯ ಸರಕಾರದಿಂದ ಬಂದಿರುವ ಮಾರ್ಗಸೂಚಿ ಪ್ರಕಾರ, ಜಿಲ್ಲೆಯಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗೂ ಸಭೆ ನಡೆಸಲಾಗಿದೆ. ಸಾರ್ವಜನಿಕರು ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ, ಅನಗತ್ಯ ಗೊಂದಲ ಮಾಡಿಕೊಳ್ಳುವುದೂ ಬೇಡ ಎಂದವರು ತಿಳಿಸಿದ್ದಾರೆ.
ಸದ್ಯ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಮುಂಜಾಗ್ರತೆ ಹಿನ್ನೆಲೆಯಲ್ಲಿ ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಸಿದ್ದವಾಗಿಡಲು ಸೂಚಿಸಿದ್ದೇವೆ. ಇದರ ಜೊತೆಗೆ ಕಾಸರಗೋಡು ಗಡಿಗೆ ಹೊಂದಿಕೊಂಡಿರುವ ಸ್ವರ್ಗ, ಸಾರಡ್ಕ, ಜಾಲ್ಸೂರು, ತಲಪಾಡಿ, ಈಶ್ವರಮಂಗಲದಲ್ಲಿ ಅಲರ್ಟ್ ಇರಲು ಸೂಚಿಸಲಾಗಿದೆ. ಹಾಗೆಂದು, ಈ ಐದು ಕಡೆ ಯಾವುದೇ ನಿರ್ಬಂಧ ಇರೋದಿಲ್ಲ. ಆದರೆ ಅಲ್ಲಿಂದ ಬರೋರಿಗೆ ನಮ್ಮ ಸಿಬ್ಬಂದಿ ಮೈಕ್ ಮೂಲಕ ಮಾಹಿತಿ ಕೊಡ್ತಾರೆ. ನಮಗೆ ಗಡಿಯಲ್ಲಿ ತಪಾಸಣೆ ಮಾಡಲು ಸೂಚನೆ ಬಂದಿಲ್ಲ. ಜನರಿಗೆ ಮಾಹಿತಿ ಕೊಡ್ತೇವೆ, ಅಗತ್ಯ ಬಿದ್ದರೆ ತಪಾಸಣೆ ಮಾಡುತ್ತೇವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ, ಖಾಸಗಿ ಒಟ್ಟು ಸೇರಿ 10,986 ಬೆಡ್ ಇದೆ, 1376 ಆಕ್ಸಿಜನ್ ಸಪೋರ್ಟ್ ಬೆಡ್ ಗಳಿವೆ. ಐಸಿಯು ಬೆಡ್ 728, ವೆಂಟಿಲೇಟರ್ 336 ಇವೆ ಎಂದು ಹೇಳಿದ ಅವರು, ಕೇರಳದ ಶಬರಿಮಲೆಗೆ ಹೋಗಿ ಬಂದವರಿಗೆ ರೋಗ ಲಕ್ಷಣ ಇದ್ರೆ ಪರೀಕ್ಷೆಗೆ ಒಳಪಡಿಸುತ್ತೇವೆ. ಸದ್ಯ ನಮಗೆ ನಿತ್ಯ ಕನಿಷ್ಠ 321 ಜನರನ್ನು ಪರೀಕ್ಷೆ ಮಾಡುವ ಬಗ್ಗೆ ಗುರಿ ನೀಡಲಾಗಿದೆ. ಅದನ್ನು ಮಾಡುತ್ತೇವೆ ಎಂದು ಹೇಳಿದರು.
Mangalore One Corona positive case detected says DHO. No RTPCR In talapdy border, Ayyappa devotees should take care of themselves if any symptoms found says DHO Thimayya.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm