ಬ್ರೇಕಿಂಗ್ ನ್ಯೂಸ್
18-11-20 03:57 pm Mangalore Correspondent ಕರಾವಳಿ
ಮಂಗಳೂರು, ನ.18: ಬಂಟ್ವಾಳ ಮತ್ತು ಮಂಗಳೂರು ತಾಲೂಕಿನ 25 ಹಳ್ಳಿಗಳಿಗೆ ನೇತ್ರಾವತಿ ನದಿಯಿಂದ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಕೈರಂಗಳದ ಬಳಿ 72 ಎಂ.ಎಲ್.ಡಿ ಸಾಮರ್ಥ್ಯ ದ ನೀರು ಶುದ್ಧೀಕರಣ ಘಟಕ ಸ್ಥಾಪಿಸಲಾಗುತ್ತಿದ್ದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಡಿ.280 ಕೋಟಿ ರೂ. ವೆಚ್ಚದಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಯೋಜನೆಯಿಂದ ಉಳ್ಳಾಲ ನಗರ ಸಭೆ, ಕೋಟೆಕಾರ್ ಪಟ್ಟಣ ಪಂಚಾಯತ್ ಸೇರಿದಂತೆ 25 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಆಗಲಿದೆ. ಅಲ್ಲದೆ ಸುಮಾರು 30 ವರ್ಷಗಳ ವರೆಗೆ ಈ ಪ್ರದೇಶಗಳ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಇದರೊಂದಿಗೆ ಜಗಜ್ಜೀವನ್ ರಾಮ್ ಮಿಶನ್ ಮೂಲಕ ಮಂಗಳೂರು ತಾಲೂಕಿನ ಗ್ರಾಮಗಳಿಗೆ ಸಮುದಾಯದ ಸಹಭಾಗಿತ್ವದಡಿ ನೀರಿನ ವ್ಯವಸ್ಥೆ ಕಲ್ಪಿಸಲು 25.2 ಕೋಟಿ ರೂ ಮಂಜೂರಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಹರೇಕಳದಲ್ಲಿ 200 ಕೋಟಿ ರೂ. ವೆಚ್ಚದ ಬ್ಯಾರೇಜ್
ಹರೇಕಳದಲ್ಲಿ 200 ಕೋಟಿ ರೂ. ವೆಚ್ಚದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಬ್ಯಾರೇಜ್ ನಿರ್ಮಿಸಲಾಗುತ್ತಿದ್ದು ಈ ಮೂಲಕ ಆಸುಪಾಸಿನ ಗ್ರಾಮಗಳು ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೂ ಕುಡಿಯುವ ನೀರಿನ ಸಮಸ್ಯೆಗೆ ಶ್ವಾಶ್ವತ ಪರಿಹಾರ ದೊರೆಯಲಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಬಿಜೆಪಿಯಿಂದ ಓಲೈಕೆ ರಾಜಕಾರಣ
ರಾಜ್ಯದ ಉಪ ಚುನಾವಣೆಯ ಸಂದರ್ಭದಲ್ಲಿ ಜನರಿಂದ ಮತ ಪಡೆಯಲು ಬಿಜೆಪಿ ಒಲೈಕೆ ರಾಜಕೀಯದಲ್ಲಿ ತೊಡಗಿದೆ. ಈ ಹಿನ್ನೆಲೆಯಲ್ಲಿ ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಗೊಲ್ಲ ಸಮುದಾಯದಕ್ಕೆ ನಿಗಮ ನೀಡುವ ಭರವಸೆ ನೀಡಲಾಯಿತು. ಇದೀಗ ಬಸವ ಕಲ್ಯಾಣದಲ್ಲಿ ಮರಾಠರ ಮತ್ತು ವೀರಶೈವ ಲಿಂಗಾಯತರ ಮತ ಪಡೆಯಲು ಮರಾಠ ಅಭಿವೃದ್ಧಿ ನಿಗಮ, ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಲು ಮುಖ್ಯ ಮಂತ್ರಿ ಮುಂದಾಗಿದ್ದಾರೆ. ಈ ರೀತಿ ಒಲೈಕೆ ರಾಜಕಾರಣದಲ್ಲಿ ತೊಡಗಿರುವ ರಾಜ್ಯದ ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಜಾತಿಯವರಿಗೂ ಅಭಿವೃದ್ಧಿ ನಿಗಮವನ್ನು ರಚಿಸಲು ಮುಂದಾಗಲಿ ಎಂದರು.
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರನ್ನು ವಿನಾಕಾರಣ ವರ್ಗಾವಣೆ ಮಾಡಲಾಗುತ್ತದೆ. ಪೊಲೀಸರ ನೈತಿಕ ಬಲ ಹೆಚ್ಚಿಸಲು ಕಾಲ ಕಾಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಕುಂದು ಕೊರತೆಗಳನ್ನು ನಿವಾರಿಸ ಬೇಕಾಗಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಉಳ್ಳಾಲ ನಗರ ಸಭೆಯ ನೂತನ ಅಧ್ಯಕ್ಷೆ ಚಿತ್ರಕಲಾ, ಉಪಾಧ್ಯಕ್ಷ ಅಯೂಬ್, ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು , ಕಾಂಗ್ರೆಸ್ ಮುಖಂಡರಾದ ಈಶ್ವರ ಉಳ್ಳಾಲ್, ಎ.ಸಿ.ಜಯರಾಜ್, ಸದಾಶಿವ ಉಳ್ಳಾಲ್, ಎನ್.ಎಸ್.ಕರೀಂ ಮೊದಲಾದವರು ಉಪಸ್ಥಿತರಿದ್ದರು.
Video:
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 12:12 pm
Hk News Staffer
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm