ಬ್ರೇಕಿಂಗ್ ನ್ಯೂಸ್
22-12-23 02:35 pm Udupi Correspondent ಕರಾವಳಿ
ಉಡುಪಿ, ಡಿ.22: ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆಯಾಗಿದ್ದು ಅದರಲ್ಲಿದ್ದ 8 ಮಂದಿ ಮೀನುಗಾರರು ಬೇರೆ ಬೋಟ್ ಮೂಲಕ ರಕ್ಷಿಸಲ್ಪಟ್ಟಿದ್ದಾರೆ.
ಕಡೆಕಾರು ಶ್ರೀ ನಾರಾಯಣ ಎಂಬ ಹೆಸರಿನ ಬೋಟ್ ಡಿ.12ರಂದು ರಾತ್ರಿ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿತ್ತು. ಡಿಸೆಂಬರ್ 19 ರಂದು ಹಿಂತಿರುಗಿ ಬರುತ್ತಿದ್ದಾಗ ಮಲ್ಪೆಯಿಂದ 26 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ದೋಣಿ ಮುಳುಗಡೆಗೊಂಡಿದೆ.
ಬೆಳಗ್ಗೆ 6.30ರ ಸುಮಾರಿಗೆ ನೀರಿನಡಿಯಲ್ಲಿ ಬಂಡೆ ಕಲ್ಲು ದೋಣಿಯ ತಳಕ್ಕೆ ಸ್ಪರ್ಶಿಸಿ ತಳಭಾಗ ಒಡೆದು ಹೋಗಿದ್ದು ನೀರು ನುಗ್ಗಲು ಆರಂಭಿಸಿತ್ತು. ಸಿಬ್ಬಂದಿ ಕೂಡಲೇ ವೈರ್ ಲೆಸ್ ಸಂಪರ್ಕ ಬಳಸಿ ಇತರೆ ಬೋಟ್ ಗಳಿಗೆ ಸಂದೇಶ ರವಾನಿಸಿದ್ದಾರೆ. ಮೂಕಾಂಬಿಕಾ ಹೆಸರಿನ ದೋಣಿಯಲ್ಲಿದ್ದವರು ಸ್ಥಳಕ್ಕೆ ಧಾವಿಸಿದ್ದು ಮುಳುಗುತ್ತಿರುವ ದೋಣಿಯನ್ನು ಕಟ್ಟಿ ದಡಕ್ಕೆ ಒಯ್ಯಲು ಪ್ರಯತ್ನಿಸಿದ್ದಾರೆ, ಆದರೆ ನೀರಿನ ಅಬ್ಬರ ಜಾಸ್ತಿಯಿದ್ದುದರಿಂದ ಸಾಧ್ಯವಾಗಲಿಲ್ಲ. 8 ಗಂಟೆ ವೇಳೆಗೆ ದೋಣಿ ಸಂಪೂರ್ಣ ಮುಳುಗಡೆಯಾಗಿತ್ತು.
ಅದೃಷ್ಟವಶಾತ್ ಮೂಕಾಂಬಿಕಾ ದೋಣಿಯ ಮೂಲಕ ಮುಳುಗಡೆಯಾದ ಬೋಟಿನಲ್ಲಿದ್ದ ಮೀನುಗಾರರನ್ನು ಮರಳಿ ದಡಕ್ಕೆ ಕರೆತರಲಾಯಿತು. ಘಟನೆಯಿಂದ ಸುಮಾರು 18 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
Eight fishermen who were on board a deep-sea fishing boat that capsized off Malpe coast in Udupi district were rescued by fishermen from another boat, police said.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm