ಬ್ರೇಕಿಂಗ್ ನ್ಯೂಸ್
22-12-23 06:31 pm Mangalore Correspondent ಕರಾವಳಿ
ಮಂಗಳೂರು, ಡಿ.22: ಮೂಲ್ಕಿ ಮತ್ತು ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳನ್ನು ಶೀಘ್ರದಲ್ಲೇ ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಅವರು ಬುಧವಾರ ಮೂಲ್ಕಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದರು. ಮೂಲ್ಕಿ ಸಮುದಾಯ ಆಸ್ಪತ್ರೆಗೆ ಈಗಾಗಲೇ ಎಂ.ಆರ್.ಪಿ.ಎಲ್ ಸಂಸ್ಥೆಯು ಒಂದು ಡಯಾಲಿಸಿಸ್ ಯಂತ್ರವನ್ನು ನೀಡಿದೆ. ರಾಜ್ಯ ಸರಕಾರದಿಂದ ಎರಡು ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು. ಇದಕ್ಕಾಗಿ ಎರಡೂ ಆಸ್ಪತ್ರೆಗಳಿಗೆ ಅಗತ್ಯ ವೈದ್ಯರನ್ನು ಮತ್ತು ತಂತ್ರಜ್ಞರನ್ನು ನೇಮಿಸಲಾಗುವುದು ಎಂದು ಸಚಿವರು ಹೇಳಿದರು. ಇದರಿಂದ ಇಲ್ಲಿನ ರೋಗಿಗಳು ಡಯಾಲಿಸಿಸ್ ಗೆ ಮಂಗಳೂರಿಗೆ ಹೋಗಬೇಕಾದ ಅನಿವಾರ್ಯತೆ ತಪ್ಪಲಿದೆ ಎಂದರು.

ಆಸ್ಪತ್ರೆಯಲ್ಲಿ ಡಯಾಬಿಟಿಸ್ ಗೆ ಸಂಬಂಧಿಸಿದ ಎಲ್ಲ ಔಷಧಗಳನ್ನು ಸಂಗ್ರಹಿಸಿಡಬೇಕು. ಆಸ್ಪತ್ರೆಯ ಅಭಿವೃದ್ಧಿಗೆ ಬೇಕಾದ ಅನುದಾನ ನೀಡಲಾಗುವುದು. ಇಲ್ಲಿಗೆ ಮಕ್ಕಳು, ಸ್ತ್ರೀರೋಗ ತಜ್ಞರನ್ನು ನೇಮಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ಪರಿಶೀಲಿಸಲಾಗುವುದು. ಆಸ್ಪತ್ರೆಯ ಸಂಪೂರ್ಣ ಬಳಕೆಗೆ ಒತ್ತು ನೀಡಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಉಮಾನಾಥ ಕೋಟ್ಯಾನ್, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರವಾಸಿ ಮಂದಿರ ಕಾಮಗಾರಿ
ಸಚಿವರು ಇದಕ್ಕೂ ಮೊದಲು ಮೂಲ್ಕಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಾಣಗೊಳ್ಳುತ್ತಿರುವ ಪ್ರವಾಸಿ ಮಂದಿರ ನಿವೇಶನಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಮೂಲ್ಕಿ ಮಿನಿ ವಿಧಾನಸೌಧ ಕಾಮಗಾರಿಯನ್ನು ಪರಿಶೀಲಿಸಿದರು. ಮೂಲ್ಕಿ ನಗರ ಪಂಚಾಯತ್ ನೂತನ ಕಾರ್ಯಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
Health and District In-charge Minister Dinesh Gundu Rao has said that dialysis centres will be set up at Mulki and Moodabidri Community Health Centres (CHCs) soon.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm