ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm