ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm