ಬ್ರೇಕಿಂಗ್ ನ್ಯೂಸ್
23-12-23 10:18 pm Mangalore Correspondent ಕರಾವಳಿ
ಮಂಗಳೂರು, ಡಿ.23: ಮಂಗಳೂರಿನಿಂದ ಬೆಂಗಳೂರಿಗೆ ರಾತ್ರಿ 8.15ಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ಕೊನೆಕ್ಷಣದಲ್ಲಿ ರದ್ದಾದ ಕಾರಣ ಪ್ರಯಾಣಿಕರು ಆಕ್ರೋಶಿತರಾಗಿ ಏರ್ಪೋರ್ಟ್ ಸಿಬಂದಿಯನ್ನು ತರಾಟೆಗೆತ್ತಿಕೊಂಡ ಘಟನೆ ನಡೆದಿದೆ.
ಬಜ್ಪೆ ವಿಮಾನ ನಿಲ್ದಾಣದಿಂದ ರಾತ್ರಿ 8.15ಕ್ಕೆ ಏರ್ ಇಂಡಿಯಾ ವಿಮಾನ ನಿಗದಿಯಾಗಿತ್ತು. ಆದರೆ ವಿಮಾನ ಬಂದಿರಲಿಲ್ಲ. ಸಮಯ ಕಳೆದರೂ ವಿಮಾನ ಬಾರದೇ ಇದ್ದುದರಿಂದ ಪ್ರಯಾಣಿಕರು ಆಕ್ರೋಶಗೊಂಡಿದ್ದು ಏರ್ ಇಂಡಿಯಾ ಸಿಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ನಾವು ಅಮೆರಿಕಕ್ಕೆ ಹೋಗಬೇಕು. ಬೆಂಗಳೂರಿಗೆ ಸಕಾಲಕ್ಕೆ ತಲುಪದೇ ಇದ್ದಲ್ಲಿ ವಿಮಾನ ಸಿಗಲ್ಲ. ನೀವು ಕೊನೆಯ ಕ್ಷಣದಲ್ಲಿ ವಿಮಾನ ಇಲ್ಲಾಂದ್ರೆ ಏನು ಮಾಡಬೇಕೆಂದು ಪ್ರಯಾಣಿಕರೊಬ್ಬರು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ. ಇನ್ನು ಕೆಲವರು ಬೆಂಗಳೂರಿನಲ್ಲಿ ಪರೀಕ್ಷೆ ಬರೆಯಲು ಹೊರಟವರಿದ್ದರು. ವಿಮಾನ ಇಲ್ಲಾಂದ್ರೆ ಮೊದಲೇ ಹೇಳಬೇಕಲ್ಲ. ಹೀಗೆ ಮಾಡಿದರೆ ನಾವೇನು ಮಾಡಬೇಕು. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದ್ದಾರೆ.


ಕ್ರಿಸ್ಮಸ್ ಆಗಿದ್ದರಿಂದ ತುರ್ತು ಪ್ರಯಾಣಕ್ಕೆ ಹೊರಟವರೂ ಇದ್ದರು. ವಿಮಾನ ಇಲ್ಲದೆ ಕಂಗಾಲಾಗಿದ್ದರು. ಅರ್ಜೆಂಟ್ ಹೋಗಲೇಬೇಕು, ನೀವು ಪರ್ಯಾಯ ವ್ಯವಸ್ಥೆ ಮಾಡಿ. ಬೇರೆ ವಿಮಾನ ವ್ಯವಸ್ಥೆ ಮಾಡಿ. ಈಗ ರದ್ದಾಗಿದೆ ಎಂದರೆ ಆಗೋದಿಲ್ಲ ಎಂದು ಆಕ್ರೋಶ ತೋರಿದ್ದಾರೆ. ಸಿಬಂದಿ ಪ್ರಯಾಣಿಕರನ್ನು ಸಮಾಧಾನ ಮಾಡಲೆತ್ನಿಸಿದರೂ ಕೇಳಲಿಲ್ಲ. ಕೊನೆಗೆ, ಏರ್ ಇಂಡಿಯಾ ಸಿಬಂದಿ ವಿಮಾನವು ತಾಂತ್ರಿಕ ತೊಂದರೆಗೀಡಾಗಿದ್ದು ಬೆಂಗಳೂರಿನಲ್ಲಿ ಉಳಿದಿದೆ. ಪರ್ಯಾಯ ವ್ಯವಸ್ಥೆ ಮಾಡಿದ್ದು ರಾತ್ರಿ 2.15ಕ್ಕೆ ಬೇರೊಂದು ವಿಮಾನದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಎಂಟು ಗಂಟೆಯ ವಿಮಾನಕ್ಕಾಗಿ ಬಂದಿದ್ದ ಪ್ರಯಾಣಿಕರು ಬದಲಿ ವ್ಯವಸ್ಥೆಗಾಗಿ ಕಾದು ಕುಳಿತಿದ್ದಾರೆ.
Mangalore Bangalore airindia flight of 8:10 cancelled at last moment, passengers go angry, fight, video viral.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm