ಬ್ರೇಕಿಂಗ್ ನ್ಯೂಸ್
24-12-23 08:49 pm Mangaluru Correspondent ಕರಾವಳಿ
ಮಂಗಳೂರು, ಡಿ.24: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಬಹಳಷ್ಟು ಕಡಿಮೆಯಾಗಿದೆ ಎಂದು ನನಗೆ ಮಾಹಿತಿ ಬಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದ ಅವರಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ವಿಫಲವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಂತಹ ಪ್ರಕರಣಗಳ ನಂಬರ್ ಗಳು ಕಡಿಮೆ ಆಗಿರೋದಂತು ಸತ್ಯ. ನಾವು ಅದರ ಬಗ್ಗೆ ಬಹಳ ಎಚ್ಚರಿಕೆ ವಹಿಸುತ್ತಿದ್ದೇವೆ. ಪೊಲೀಸ್ ಕಮಿಷನರ್, ಎಸ್ಪಿ, ಐ.ಜಿಯವರಿಗೆ ಸೂಚನೆ ಕೊಟ್ಟಿದ್ದೇನೆ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ ಎಂದು ಸೂಚನೆ ನೀಡಿದ್ದೇನೆ.
ಹಾಗಂತ ಎಲ್ಲರ ಮೇಲೆ ಕೇಸು ಹಾಕಬೇಕೆಂದಿಲ್ಲ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ. ಅಂತಹ ಕೃತ್ಯ ಮಾಡದವರು ಭಯ ಪಡುವ ಅಗತ್ಯವಿಲ್ಲ ಎಂದರು. ಆ್ಯಂಟಿ ಕಮ್ಯೂನಲ್ ವಿಂಗ್ ಗೆ ನೇಮಕಾತಿ ಪ್ರಕ್ರಿಯೆ ಆಗ್ತಿದೆ. ಅವರಿಗೆ ಇನ್ನು ಹೆಚ್ಚಿನ ಸಿಬ್ಬಂದಿ ಕೊಡಬೇಕಾಗಿದೆ ಎಂದು ಕೇಳಿದ್ದಾರೆ. ಸಿಬಂದಿ ಪೂರೈಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹಿಜಾಬ್ ನಿಷೇಧ ವಾಪಸು ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೊಮ್ಮಾಯಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ನಾವು ಆದೇಶ ಮಾಡಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಮಾಡಿದ್ರೂ ನಾವು ಪರಿಶೀಲನೆ ಮಾಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಾಧಕ ಬಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತೆ. ಗೊಂದಲ ಮೂಡಿಸುವ ಅವಶ್ಯಕತೆಯಿಲ್ಲ ಎಂದರು.
ಆ ಸಮುದಾಯವದವರು ಹಿಂದಿನಿಂದಲೂ ಸಹ ಹಿಜಾಬ್ ಹಾಕಿಕೊಂಡು ಶಾಲೆಗೆ ಬರ್ತಿದ್ದಾರೆ. ಇತ್ತಿಚೇಗಷ್ಟೇ ಬಿಜೆಪಿ ಸರ್ಕಾರ ಬಂದಾಗ ಅದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನ ಆಗಿದೆ. ಸಂವಿಧಾನವನ್ನು ಬಿಟ್ಟು ನಾವು ಯಾವುದೇ ಕೆಲಸ ಮಾಡೋದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಮಾಡಿದ್ರೂ ಕೆಲವರಿಗೆ ನೋವಾಗಬಹುದು, ಕೆಲವರಿಗೆ ಸಂತೋಷವಾಗಬಹುದು. ಆದ್ರೆ ಸಂವಿಧಾನದ ಚೌಕಟ್ಟಿನಲ್ಲಿ ಮಾತ್ರ ತೀರ್ಮಾನ ತೆಗೆದುಕೊಳ್ತೇವೆ ಎಂದು ಪರಮೇಶ್ವರ್ ಹೇಳಿದರು.
Moral policing rates are much lesser than before in Mangalore says Home Minister
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm