ಬ್ರೇಕಿಂಗ್ ನ್ಯೂಸ್
24-12-23 08:49 pm Mangaluru Correspondent ಕರಾವಳಿ
ಮಂಗಳೂರು, ಡಿ.24: ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ಬಹಳಷ್ಟು ಕಡಿಮೆಯಾಗಿದೆ ಎಂದು ನನಗೆ ಮಾಹಿತಿ ಬಂದಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದ ಅವರಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ವಿಫಲವಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಅಂತಹ ಪ್ರಕರಣಗಳ ನಂಬರ್ ಗಳು ಕಡಿಮೆ ಆಗಿರೋದಂತು ಸತ್ಯ. ನಾವು ಅದರ ಬಗ್ಗೆ ಬಹಳ ಎಚ್ಚರಿಕೆ ವಹಿಸುತ್ತಿದ್ದೇವೆ. ಪೊಲೀಸ್ ಕಮಿಷನರ್, ಎಸ್ಪಿ, ಐ.ಜಿಯವರಿಗೆ ಸೂಚನೆ ಕೊಟ್ಟಿದ್ದೇನೆ. ಸಮಾಜದಲ್ಲಿ ಸಾಮರಸ್ಯ ಇರಬೇಕು. ಅಹಿತಕರ ಘಟನೆಗಳಿಗೆ ಅವಕಾಶ ಕೊಡಬೇಡಿ ಎಂದು ಸೂಚನೆ ನೀಡಿದ್ದೇನೆ.
ಹಾಗಂತ ಎಲ್ಲರ ಮೇಲೆ ಕೇಸು ಹಾಕಬೇಕೆಂದಿಲ್ಲ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದೇನೆ. ಅಂತಹ ಕೃತ್ಯ ಮಾಡದವರು ಭಯ ಪಡುವ ಅಗತ್ಯವಿಲ್ಲ ಎಂದರು. ಆ್ಯಂಟಿ ಕಮ್ಯೂನಲ್ ವಿಂಗ್ ಗೆ ನೇಮಕಾತಿ ಪ್ರಕ್ರಿಯೆ ಆಗ್ತಿದೆ. ಅವರಿಗೆ ಇನ್ನು ಹೆಚ್ಚಿನ ಸಿಬ್ಬಂದಿ ಕೊಡಬೇಕಾಗಿದೆ ಎಂದು ಕೇಳಿದ್ದಾರೆ. ಸಿಬಂದಿ ಪೂರೈಸುತ್ತೇವೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಹಿಜಾಬ್ ನಿಷೇಧ ವಾಪಸು ಪಡೆಯುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಚಿವರು, ಬೊಮ್ಮಾಯಿಯವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ, ನಾವು ಆದೇಶ ಮಾಡಿಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಮಾಡಿದ್ರೂ ನಾವು ಪರಿಶೀಲನೆ ಮಾಡ್ತೇವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಸಾಧಕ ಬಾಧಕ ನೋಡಿಕೊಂಡು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತೆ. ಗೊಂದಲ ಮೂಡಿಸುವ ಅವಶ್ಯಕತೆಯಿಲ್ಲ ಎಂದರು.
ಆ ಸಮುದಾಯವದವರು ಹಿಂದಿನಿಂದಲೂ ಸಹ ಹಿಜಾಬ್ ಹಾಕಿಕೊಂಡು ಶಾಲೆಗೆ ಬರ್ತಿದ್ದಾರೆ. ಇತ್ತಿಚೇಗಷ್ಟೇ ಬಿಜೆಪಿ ಸರ್ಕಾರ ಬಂದಾಗ ಅದರ ಬಗ್ಗೆ ಬೇರೆ ಬೇರೆ ವ್ಯಾಖ್ಯಾನ ಆಗಿದೆ. ಸಂವಿಧಾನವನ್ನು ಬಿಟ್ಟು ನಾವು ಯಾವುದೇ ಕೆಲಸ ಮಾಡೋದಿಲ್ಲ. ಸಂವಿಧಾನದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಮಾಡಿದ್ರೂ ಕೆಲವರಿಗೆ ನೋವಾಗಬಹುದು, ಕೆಲವರಿಗೆ ಸಂತೋಷವಾಗಬಹುದು. ಆದ್ರೆ ಸಂವಿಧಾನದ ಚೌಕಟ್ಟಿನಲ್ಲಿ ಮಾತ್ರ ತೀರ್ಮಾನ ತೆಗೆದುಕೊಳ್ತೇವೆ ಎಂದು ಪರಮೇಶ್ವರ್ ಹೇಳಿದರು.
Moral policing rates are much lesser than before in Mangalore says Home Minister
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm